Featured

ಗುಜರಾತ್‌ ಶಾಲೆಯಲ್ಲಿ ಹಾಜರಾತಿ ವೇಳೆ ಮಕ್ಕಳು ಜೈಹಿಂದ್‌, ಜೈಭಾರತ್ ಎಂದು ಹೇಳುತ್ತಾರೆ..

ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ಗುಜರಾತ್‌ ಶಾಲೆಯಲ್ಲಿ ಹಾಜರಾತಿ ವೇಳೆ ಮಕ್ಕಳು ಜೈಹಿಂದ್‌, ಜೈಭಾರತ್ ಹೇಳುತ್ತಾರೆ

ಅಹ್ಮದಾಬಾದ್‌ : ಗುಜರಾತ್‌ ಶಾಲಾ ಮಕ್ಕಳು ಇಂದು ಜನವರಿ 1 ರಿಂದ ತರಗತಿ ಶಿಕ್ಷಕರು ಹಾಜರಿ ಕರೆಯುವಾಗ ‘ಪ್ರಸೆಂಟ್‌ ‘ ಎನ್ನುವಂತಿಲ್ಲ. ಅವರು ‘ಜೈಹಿಂದ್‌’ ಅಥವಾ ‘ಜೈ ಭಾರತ್‌’ ಎನ್ನಬೇಕಾಗುತ್ತದೆ.

ಗುಜರಾತಿನ ಪ್ರಾಥಮಿಕ ಮತ್ತು ಹೈಸ್ಕೂಲ್‌ ಶಿಕ್ಷಣದ ನಿರ್ದೇಶನಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಆ ಪ್ರಕಾರ 1ರಿಂದ 12ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಇಂದಿನಿಂದ ತರಗತಿಯಲ್ಲಿ  ಹಾಜರಿ ಕರೆಯುವಾಗ ಜೈಹಿಂದ್‌ ಅಥವಾ ಜೈ ಭಾರತ್‌ ಎಂದು ಹೇಳುತ್ತಾರೆ.

ಗುಜರಾತಿನ ಅನುದಾನಿತ ಶಾಲೆಗಳು, ಸ್ವಂತ ಹಣಕಾಸಿನ ಶಾಲೆಗಳು ಕೂಡ ಸರಕಾರದ ಈ ಅಧಿಸೂಚನೆಯಂತೆ ನಡೆದುಕೊಳ್ಳಬೇಕಾಗಿದೆ.

ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಹೈಸ್ಕೂಲ್‌ ಗಳಲ್ಲಿ ಈ ಹೊಸ ಪದ್ಧತಿಯನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರುವಂತೆ ಶಿಕ್ಷಕರಿಗೆ, ಶಿಕ್ಷಣಾಧಿಕಾರಿಗಳು ಆದೇಶಿಸಲಾಗಿದೆ.

ಸೋಮವಾರ ನಡೆದ ಸಭೆಯಲ್ಲಿ ಗುಜರಾತ್‌ ಶಿಕ್ಷಣ ಸಚಿವ ಭೂಪೇಂದ್ರಸಿನ್‌ ಚುದಾಸಮ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸಲೆಂದು ಈ ಕ್ರಮವನ್ನು ಪರಿಚಯಿಸಲಾಗಿದೆ.

ನೂತನ ಅಧಿಸೂಚನೆಯನ್ನು ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಕಳುಹಿಸಲಾಗಿದ್ದು, ಜ. 1ರಿಂದಲೇ ಜಾರಿಗೆ ಬರುವಂತೆ ನೋಡಿಕೊಳ್ಳಲು ತಿಳಿಸಲಾಗಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago