ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ಗುಜರಾತ್ ಶಾಲೆಯಲ್ಲಿ ಹಾಜರಾತಿ ವೇಳೆ ಮಕ್ಕಳು ಜೈಹಿಂದ್, ಜೈಭಾರತ್ ಹೇಳುತ್ತಾರೆ
ಅಹ್ಮದಾಬಾದ್ : ಗುಜರಾತ್ ಶಾಲಾ ಮಕ್ಕಳು ಇಂದು ಜನವರಿ 1 ರಿಂದ ತರಗತಿ ಶಿಕ್ಷಕರು ಹಾಜರಿ ಕರೆಯುವಾಗ ‘ಪ್ರಸೆಂಟ್ ‘ ಎನ್ನುವಂತಿಲ್ಲ. ಅವರು ‘ಜೈಹಿಂದ್’ ಅಥವಾ ‘ಜೈ ಭಾರತ್’ ಎನ್ನಬೇಕಾಗುತ್ತದೆ.
ಗುಜರಾತಿನ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣದ ನಿರ್ದೇಶನಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಆ ಪ್ರಕಾರ 1ರಿಂದ 12ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಇಂದಿನಿಂದ ತರಗತಿಯಲ್ಲಿ ಹಾಜರಿ ಕರೆಯುವಾಗ ಜೈಹಿಂದ್ ಅಥವಾ ಜೈ ಭಾರತ್ ಎಂದು ಹೇಳುತ್ತಾರೆ.
ಗುಜರಾತಿನ ಅನುದಾನಿತ ಶಾಲೆಗಳು, ಸ್ವಂತ ಹಣಕಾಸಿನ ಶಾಲೆಗಳು ಕೂಡ ಸರಕಾರದ ಈ ಅಧಿಸೂಚನೆಯಂತೆ ನಡೆದುಕೊಳ್ಳಬೇಕಾಗಿದೆ.
ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಲ್ಲಿ ಈ ಹೊಸ ಪದ್ಧತಿಯನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರುವಂತೆ ಶಿಕ್ಷಕರಿಗೆ, ಶಿಕ್ಷಣಾಧಿಕಾರಿಗಳು ಆದೇಶಿಸಲಾಗಿದೆ.
ಸೋಮವಾರ ನಡೆದ ಸಭೆಯಲ್ಲಿ ಗುಜರಾತ್ ಶಿಕ್ಷಣ ಸಚಿವ ಭೂಪೇಂದ್ರಸಿನ್ ಚುದಾಸಮ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸಲೆಂದು ಈ ಕ್ರಮವನ್ನು ಪರಿಚಯಿಸಲಾಗಿದೆ.
ನೂತನ ಅಧಿಸೂಚನೆಯನ್ನು ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಕಳುಹಿಸಲಾಗಿದ್ದು, ಜ. 1ರಿಂದಲೇ ಜಾರಿಗೆ ಬರುವಂತೆ ನೋಡಿಕೊಳ್ಳಲು ತಿಳಿಸಲಾಗಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…