Featured

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ-ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ ಆದೇಶವನ್ನು ಹೇಗೆ ಹೊರಡಿಸಲಾಗಿದೆ? ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ. ಹೀಗಾಗಿ, ಗುಟ್ಕಾ ನಿಷೇಧ ಆದೇಶವನ್ನು ಶೀಘ್ರದಲ್ಲೇ ಹಿಂಪಡೆಯುವಂತೆ ಅವರು ಸೂಚನೆ ನೀಡಿದ್ದಾರೆ.

ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ಗುರುವಾರ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಶೀಘ್ರದಲ್ಲೇ ಗುಟ್ಕಾ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಅವರು ತಿಳಿಸಿದ್ದಾರೆ. ಇನ್ನು ಈ ಆದೇಶ ಇಂದೋ ಅಥವಾ ನಾಳೆಯೋ ಹೊರಬೀಳುವ ಸಾಧ್ಯತೆಯಿದೆ.

ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಅಧಿಕೃತ ಅಧಿಸೂಚನೆ ಹೊರಡಿಸಿದ್ದರು. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆ ಬುಧವಾರ ಈ ಆದೇಶ ಹೊರಡಿಸಿತ್ತು. ಇನ್ನು ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ನಿಷೇಧ ಜಾರಿಗೆ ಬಂದಿತ್ತು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

33 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

44 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

4 hours ago