Featured

ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್‌ :  ಹೊಸ ಸೆಸ್ ಮಸೂದೆ ಮಂಡನೆ – vishwanews24

ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್‌ :  ಹೊಸ ಸೆಸ್ ಮಸೂದೆ ಮಂಡನೆ

ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ. ಈ ಬಾರಿ ಗುಟ್ಕಾ, ಪಾನ್ ಮಸಾಲಾ ಮತ್ತು ತಂಬಾಕು ಆಧಾರಿತ ಉತ್ಪನ್ನಗಳ ಉದ್ಯಮವನ್ನು ಗುರಿಯಾಗಿಸಿದ ಕಠಿಣ ಕಾನೂನನ್ನು ಕೇಂದ್ರ ಸರ್ಕಾರ ಪರಿಚಯಿಸಲು ಸಜ್ಜಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ‘ಆರೋಗ್ಯ ಭದ್ರತೆಯಿಂದ ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, 2025’ ಅನ್ನು ಮಂಡಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಹೊಸ ಮಸೂದೆಯ ಪ್ರಕಾರ, ತಂಬಾಕು, ಗುಟ್ಕಾ, ಪಾನ್ ಮಸಾಲಾ ಉತ್ಪಾದನಾ ಘಟಕಗಳ ಮೇಲೆ ವಿಶೇಷ ಸೆಸ್ ವಿಧಿಸಲಾಗುತ್ತದೆ. ಇದು ಈಗಿನಂತೆ ಉತ್ಪಾದನಾ ಪ್ರಮಾಣದ ಮೇಲೆ ಅಲ್ಲ, ಕಾರ್ಖಾನೆಗಳಲ್ಲಿರುವ ಯಂತ್ರಗಳ ಉತ್ಪಾದನಾ ಸಾಮರ್ಥ್ಯದ ಆಧಾರದ ಮೇಲೆ ಲೆಕ್ಕಿಸಲ್ಪಡಲಿದೆ. ಕೈಯಿಂದ ಉತ್ಪಾದನೆ ಮಾಡುವ ಘಟಕಗಳಿಗೆ ಸ್ಥಿರ ಮಾಸಿಕ ಸೆಸ್ ವಿಧಿಸುವ ವ್ಯವಸ್ಥೆಯೂ ಸೇರಿದೆ. ಅಧಿಕಾರಿಗಳ ಪ್ರಕಾರ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಯ ಉದ್ದೇಶಕ್ಕಾಗಿ ಹೆಚ್ಚುವರಿ ಆದಾಯ ಸಂಗ್ರಹಿಸುವುದು ಈ ಮಸೂದೆಯ ಪ್ರಮುಖ ಗುರಿಯಾಗಿದೆ.

ಯಾವಾಗ ಸೆಸ್ ವಿನಾಯ್ತಿ? :
ಯಂತ್ರವೇಗದ ಉತ್ಪಾದನೆ ಮಾಡುವ ಘಟಕಗಳಿಗೆ ಪ್ರತಿ ತಿಂಗಳು ಸೆಸ್‌ ಕಡ್ಡಾಯ. ಉತ್ಪಾದನೆಯಲ್ಲಿ ನಷ್ಟವಾದರೂ ಅಥವಾ ಲಾಭ ಬಂದರೂ ಸೆಸ್ ಪಾವತಿಸಬೇಕು. ಆದರೆ ಯಂತ್ರ ಅಥವಾ ಘಟಕವು 15 ದಿನಗಳಿಗಿಂತ ಹೆಚ್ಚು ಕಾಲ ಸಂಪೂರ್ಣವಾಗಿ ಮುಚ್ಚಿರುವ ಪರಿಸ್ಥಿತಿಯಲ್ಲಿ ಮಾತ್ರ ಆ ಅವಧಿಗೆ ವಿನಾಯ್ತಿ ಸಿಗಲಿದೆ.

ಕಠಿಣ ನಿಯಮಗಳೊಂದಿಗೆ ಮೇಲ್ವಿಚಾರಣೆ:
ಹೊಸ ಕಾನೂನು ಜಾರಿಗೆ ಬಂದರೆ
-ಎಲ್ಲಾ ತಯಾರಕರಿಗೂ ನೋಂದಣಿ ಕಡ್ಡಾಯ
-ಪ್ರತಿ ತಿಂಗಳು ಉತ್ಪಾದನೆ ಹಾಗೂ ಸೆಸ್ ವಿವರಗಳ ರಿಟರ್ನ್ಸ್ ಸಲ್ಲಿಕೆ
-ಅಧಿಕಾರಿಗಳಿಗೆ ಯಾವುದೇ ಸಮಯದಲ್ಲಿ ಕಾರ್ಖಾನೆ ರೇಡ್ ಅಥವಾ ಲೆಕ್ಕಪರಿಶೋಧನೆ ಮಾಡುವ ಅಧಿಕಾರ
-ನಿಯಮ ಉಲ್ಲಂಘನೆ ಮಾಡಿದರೆ ಗರಿಷ್ಠ 5 ವರ್ಷ ಜೈಲು ಹಾಗೂ ಭಾರೀ ದಂಡ

ಯಾವಾಗ ಬೇಕಾದರೂ ಸೆಸ್ ದರವನ್ನು ಹೆಚ್ಚಿಸುವ ಅಧಿಕಾರವನ್ನೂ ಸರ್ಕಾರ ಕಾಯ್ದಿರಿಸಿಕೊಂಡಿದೆ. ಹೊಸ ಕಾನೂನು ಜಾರಿಗೆ ಬಂದರೆ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಕರಿಗೆ ನೇರ ಆರ್ಥಿಕ ಹೊರೆ ಬೀಳಲಿದೆ. ಇದರ ಪರಿಣಾಮವಾಗಿ ಉತ್ಪನ್ನಗಳ ಬೆಲೆ ಏರಿಕೆ ಸಾಧ್ಯತೆ ಜಾಸ್ತಿ. ಇದು ನೇರವಾಗಿ ಗ್ರಾಹಕರ ಮೇಲೆ ಪರಿಣಾಮ ಬೀಳಲಿದೆ ಎಂದು ಗುಟ್ಕಾ ಪ್ರಿಯರು ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago