ಗುಡ್ಡ ಕುಸಿತ : ಜು.22ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿರ್ಬಂಧ – vishwanews24
ಗುಡ್ಡ ಕುಸಿತ : ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ಪ್ರವೇಶ , ವಾಹನ ಸಂಚಾರ ನಿಷೇಧ
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಜು.22ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಶೃಂಗೇರಿ, ನರಸಿಂಹರಾಜಪುರ, ಮೂಡಿಗೆರೆ, ಕಳಸ, ಕುದುರೆಮುಖ ಭಾಗದಲ್ಲಿ ತೀವ್ರ ಮಳೆಯಾಗುತ್ತಿದ್ದು ಹಳ್ಳಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಈ ಹಿನ್ನಲೆ ಜಿಲ್ಲೆಯಲ್ಲಿನ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಈ ಹಿಂದೆ ಜಿಲ್ಲಾಡಳಿತ ಮನವಿ ಮಾಡಿತ್ತು.
ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳುವ ಮಾರ್ಗದ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಇಲ್ಲಿಗೆ ತೆರಳುವ ಮಾರ್ಗ ಕಿರಿದಾಗಿರುವ ಕಾರಣ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾಡಳಿತ ಅಗತ್ಯ ವಾಹನಗಳನ್ನು ಹೊರತುಪಡಿಸಿ (ಸ್ಥಳೀಯ ವಾಹನ) ಹೊರಗಿನಿಂದ ಬರುವ ವಾಹನಗಳಿಗೆ ಜು.22ರ ವರೆಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿ : 13 ಭಾರತೀಯರು ಸೇರಿ 16 ಮಂದಿ ನಾಪತ್ತೆ — vishwanews24
ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸ ಕೈಗೊಳ್ಳುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವುದು ಒಳಿತು.
