Featured

ಗುಡ್ಡ ಪಾಣಾರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಮೂಲಕ ತುಳುನಾಡಿನ ದೈವಾರಾಧನೆಗೆ ಸಂದ ಗೌರವ : ಯಶ್ ಪಾಲ್ ಸುವರ್ಣ – Vishwanews24

ಗುಡ್ಡ ಪಾಣಾರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಮೂಲಕ ತುಳುನಾಡಿನ ದೈವಾರಾಧನೆಗೆ ಸಂದ ಗೌರವ : ಯಶ್ ಪಾಲ್ ಸುವರ್ಣ

67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಾಡಿನ ವಿವಿಧ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ಈ ಸಾಲಿನಲ್ಲಿ ಉಡುಪಿ ಜಿಲ್ಲೆಯ ಹಿರಿಯ ದೈವ ನರ್ತಕರಾದ ಶ್ರೀ ಗುಡ್ಡ ಪಾಣಾರ ರವರಿಗೆ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ರಾಜ್ಯ ಸರಕಾರ ತುಳುನಾಡಿನ ದೈವಾರಾಧನೆಗೆ ಗೌರವ ಸಲ್ಲಿಸಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ಕಳೆದ 38 ವರ್ಷಗಳಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಾ, ತುಳುನಾಡಿನ ಅತೀ ವಿಶಿಷ್ಟ ವಾದ ಕಾಪುವಿನಲ್ಲಿ ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಪಿಲಿ ಕೋಲದಲ್ಲಿ ದೈವ ನರ್ತನದ ಮೂಲಕ  ಕರಾವಳಿಯಾದ್ಯಂತ ಗುರುತಿಸಿಕೊಂಡಿರುವ ಗುಡ್ಡ ಪಾಣಾರ ರವರನ್ನು ಪ್ರಶಸ್ತಿ ಮನೆ ಬಾಗಿಲಿಗೆ ಅರಸಿ ಬಂದಿದೆ.
ಎಲೆ ಮರೆಯ ಕಾಯಿಯಂತೆ ಧರ್ಮ ನಿಷ್ಠೆಯಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿರುವ ಗುಡ್ಡ ಪಾಣಾರರಿಗೆ ಪ್ರಶಸ್ತಿ ನೀಡುವ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೂ ಮೌಲ್ಯ ಹೆಚ್ಚಾಗಿದೆ.
ರಾಜ್ಯ ಬಿಜೆಪಿ ಸರ್ಕಾರ ಈಗಾಲೇ 60 ವರ್ಷ ಮೇಲ್ಪಟ್ಟ ದೈವಾರಾಧಕರಿಗೆ ಮಾಸಾಶನ ನೀಡುವ ಯೋಜನೆಗೆ ಚಾಲನೆ ನೀಡಿದ್ದು,  ನಮ್ಮ ನಾಡಿನ ಸನಾತನ ಸಂಸ್ಕೃತಿಯ ಕೊಂಡಿಯಾಗಿರುವ ದೈವಾರಾಧನೆಗೆ ಪ್ರೋತ್ಸಾಹ ನೀಡುವ ಸರಕಾರದ ನಡೆ ಶ್ಲಾಘನೀಯವಾಗಿದೆ.
ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಪದ್ಮ ಪ್ರಶಸ್ತಿಗಳನ್ನು  ಅರ್ಹತೆಯ ಮೇರೆಗೆ ಸಮಾಜದಲ್ಲಿ ಅಪ್ರತಿಮ ಸಾಧನೆಗೈದ ಸಾಮಾನ್ಯ ವ್ಯಕ್ತಿಗಳನ್ನು ಅರಸಿ ಬಂದಂತೆ, ಇದೀಗ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ವಿಶೇಷ ಮುತುವರ್ಜಿಯಿಂದ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24
Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago