Featured

ಗುಡ್ಡ ಪಾಣಾರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಮೂಲಕ ತುಳುನಾಡಿನ ದೈವಾರಾಧನೆಗೆ ಸಂದ ಗೌರವ : ಯಶ್ ಪಾಲ್ ಸುವರ್ಣ – Vishwanews24

ಗುಡ್ಡ ಪಾಣಾರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಮೂಲಕ ತುಳುನಾಡಿನ ದೈವಾರಾಧನೆಗೆ ಸಂದ ಗೌರವ : ಯಶ್ ಪಾಲ್ ಸುವರ್ಣ

67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಾಡಿನ ವಿವಿಧ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ಈ ಸಾಲಿನಲ್ಲಿ ಉಡುಪಿ ಜಿಲ್ಲೆಯ ಹಿರಿಯ ದೈವ ನರ್ತಕರಾದ ಶ್ರೀ ಗುಡ್ಡ ಪಾಣಾರ ರವರಿಗೆ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ರಾಜ್ಯ ಸರಕಾರ ತುಳುನಾಡಿನ ದೈವಾರಾಧನೆಗೆ ಗೌರವ ಸಲ್ಲಿಸಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ಕಳೆದ 38 ವರ್ಷಗಳಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಾ, ತುಳುನಾಡಿನ ಅತೀ ವಿಶಿಷ್ಟ ವಾದ ಕಾಪುವಿನಲ್ಲಿ ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಪಿಲಿ ಕೋಲದಲ್ಲಿ ದೈವ ನರ್ತನದ ಮೂಲಕ  ಕರಾವಳಿಯಾದ್ಯಂತ ಗುರುತಿಸಿಕೊಂಡಿರುವ ಗುಡ್ಡ ಪಾಣಾರ ರವರನ್ನು ಪ್ರಶಸ್ತಿ ಮನೆ ಬಾಗಿಲಿಗೆ ಅರಸಿ ಬಂದಿದೆ.
ಎಲೆ ಮರೆಯ ಕಾಯಿಯಂತೆ ಧರ್ಮ ನಿಷ್ಠೆಯಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿರುವ ಗುಡ್ಡ ಪಾಣಾರರಿಗೆ ಪ್ರಶಸ್ತಿ ನೀಡುವ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೂ ಮೌಲ್ಯ ಹೆಚ್ಚಾಗಿದೆ.
ರಾಜ್ಯ ಬಿಜೆಪಿ ಸರ್ಕಾರ ಈಗಾಲೇ 60 ವರ್ಷ ಮೇಲ್ಪಟ್ಟ ದೈವಾರಾಧಕರಿಗೆ ಮಾಸಾಶನ ನೀಡುವ ಯೋಜನೆಗೆ ಚಾಲನೆ ನೀಡಿದ್ದು,  ನಮ್ಮ ನಾಡಿನ ಸನಾತನ ಸಂಸ್ಕೃತಿಯ ಕೊಂಡಿಯಾಗಿರುವ ದೈವಾರಾಧನೆಗೆ ಪ್ರೋತ್ಸಾಹ ನೀಡುವ ಸರಕಾರದ ನಡೆ ಶ್ಲಾಘನೀಯವಾಗಿದೆ.
ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಪದ್ಮ ಪ್ರಶಸ್ತಿಗಳನ್ನು  ಅರ್ಹತೆಯ ಮೇರೆಗೆ ಸಮಾಜದಲ್ಲಿ ಅಪ್ರತಿಮ ಸಾಧನೆಗೈದ ಸಾಮಾನ್ಯ ವ್ಯಕ್ತಿಗಳನ್ನು ಅರಸಿ ಬಂದಂತೆ, ಇದೀಗ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ವಿಶೇಷ ಮುತುವರ್ಜಿಯಿಂದ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24
Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 minutes ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

27 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

34 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago