ಕ್ರೈಸ್ತ ಸಮುದಾಯಕ್ಕೆ ಎ.16, 17 ಮತ್ತು 18 ಈ ಮೂರು ದಿನಗಳು ಪವಿತ್ರ ದಿನಗಳಾಗಿವೆ. 18ರಂದು ಗುಡ್ಫ್ರೈಡೆ ಸರಕಾರಿ ರಜಾ ದಿನವಾಗಿದ್ದರೂ ಅಂದು ಸಿಇಟಿ ಪರೀಕ್ಷೆ ಯನ್ನು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ನಡೆಸಲು ನಿರ್ಧರಿಸಿದೆ.
ಆನೇಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳನ್ನು ಸಿಇಟಿಗೆ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಕ್ರೈಸ್ತ ಸಮುದಾಯಕ್ಕೆ ಸೇರಿರುವ ಸಹಸ್ರಾರು ಮಂದಿ ಈಗಾಗಲೇ ಸಿಇಟಿ ಬರೆಯಲು ಅರ್ಜಿ ಸಲ್ಲಿಸಿದ್ದಾರೆ.
ಹೋಲಿ ವೀಕ್ ನಲ್ಲಿ ಸೋಮವಾರದಿಂದ ಆದಿತ್ಯವರಾದ ವರೆಗೆ ಕ್ರೈಸ್ತರು ಉಪವಾಸ ಮತ್ತು ಚರ್ಚ್ಗಳಲ್ಲಿ ಪ್ರಾರ್ಥನೆಗಳಲ್ಲಿ ತೊಡಗಿರುತ್ತಾರೆ. ಎ.19 ರಂದು ರಜೆ (ನಿರ್ಬಂಧಿತ ರಜೆ) ಇದೆ. ಎ.20ರಂದು ಈಸ್ಟರ್ ಹಬ್ಬ ಆಚರಿಸಲಾಗುತ್ತದೆ. ಅಲ್ಲದೆ ಈ ವರೆಗೆ ನಡೆದ ಎಲ್ಲ ಪರೀಕ್ಷೆಗಳನ್ನು ಶನಿವಾರ ಮತ್ತು ಆದಿತ್ಯವಾರ ನಡೆಸಲಾಗಿದೆ. ಗುಡ್ಫ್ರೈಡೆ ದಿನ ನಿಗದಿಪಡಿಸಲಾದ ಪರೀಕ್ಷೆಯನ್ನು ಮುಂದೂಡುವಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…