ಬೆಂಗಳೂರು:ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.
ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…