ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಬಿಜೆಪಿ (BJP) ಪ್ರಿಯಾಂಕ್ ಖರ್ಗೆಯವರ ಮೇಲೆ ಆರೋಪ ಮಾಡುತ್ತಿದೆ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದಿದ್ದಾರೆ.
ಸಚಿವರ ಹೆಸರು ಎಲ್ಲೂ ಡೆತ್ನೋಟ್ನಲ್ಲಿ ನೇರವಾಗಿ ಇಲ್ಲ. ಇನ್ನೂ ಬಿಜೆಪಿಯವರು ಸಿಬಿಐಗೆ ಕೊಡಲಿ ಎಂದು ಹೇಳುತ್ತಿದ್ದಾರೆ. ಅನಾವಶ್ಯಕ ರಾಜಕೀಯ ಮಾಡುವುದು ಸರಿಯಲ್ಲ. ಎಲ್ಲ ಕೇಸ್ಗಳನ್ನು ಸಿಬಿಐಗೆ ಕೊಡೋಕೆ ಸಾಧ್ಯವಿಲ್ಲ. ಸಿಐಡಿ ತನಿಖೆ ನಡೆಸಲು ಸಮರ್ಥವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆಯವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಬಿಜೆಪಿಯವರು ಅನಗತ್ಯವಾಗಿ ಅವರ ಹೆಸರು ತಂದು ರಾಜೀನಾಮೆಗೆ ಒತ್ತಾಯ ಮಾಡುತ್ತಿದ್ದಾರೆ. ಅವರು ಹೇಳಿದಂತೆ ಕೇಳೋಕೆ ಆಗಲ್ಲ ಎಂದು ಕಿಡಿಕಾರಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…