ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ; ಕೇರಳದಲ್ಲಿ ಗಗನಸಖಿ ಬಂಧನ – vishwanews24

Featured, ರಾಷ್ಟ್ರ ನ್ಯೂಸ್

ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ; ಕೇರಳದಲ್ಲಿ ಗಗನಸಖಿ ಬಂಧನ

ಕೇರಳ: ಅಕ್ರಮ ಚಿನ್ನ ಸಾಗಾಟಮಾಡುತ್ತಿದ್ದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್‌ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ : ಜೂನ್ 1ರಂದು ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣನಿಗೆ ಎಸ್‌ಐಟಿ ನೋಟಿಸ್ – vishwanews24

ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್‌ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಕ್ಯಾಬಿನ್‌ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್‌ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್‌ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್‌ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್‌ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.

ಉಡುಪಿ : ಗ್ಯಾಂಗ್ ವಾರ್ ಪ್ರಕರಣ  – ರಾತ್ರಿ 10 ಗಂಟೆಯಿಂದ ಮಣಿಪಾಲ ಬಂದ್  : ಎಸ್ಪಿ ಡಾ.ಕೆ.ಅರುಣ್ – vishwanews24

 

Leave a Reply