ಕೇರಳ: ಅಕ್ರಮ ಚಿನ್ನ ಸಾಗಾಟಮಾಡುತ್ತಿದ್ದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.
ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…