ಕೇರಳ: ಅಕ್ರಮ ಚಿನ್ನ ಸಾಗಾಟಮಾಡುತ್ತಿದ್ದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.
ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…