ಗುರುಪುರ : ಕಟೀಲಿನಿಂದ ಬಿ.ಸಿ.ರೋಡ್ಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಗುರುಪುರ ಕೈಕಂಬದ ಬಳಿ ಪೊಳಲಿ ದ್ವಾರದ ಇಳಿಜಾರು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ 7 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಸಂಜೆ ವೇಳೆಯಾಗಿದ್ದರಿಂದ ಬಸ್ನಲ್ಲಿ ಪೂರ್ತಿ ಪ್ರಯಾಣಿಕರಿದ್ದು ಪೊಳಲಿ ದ್ವಾರದ ಬಳಿ ಜನರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಆದರೆ ಇಳಿಜಾರು ಪ್ರದೇಶದಲ್ಲಿ ಒಮ್ಮೆಲೆ ಚಲಿಸಿದೆ. ಆ ಕೂಡಲೆ ಬಸ್ ಚಾಲಕನ ಚಾಕಚಕ್ಯತೆಯಿಂದ ಬಸ್ ನ್ನು ಬಲಗಡೆಗೆ ತಿರುಗಿಸಿದ್ದಾನೆ.
ಆದರೆ ಚಾಲಕ ಬಲಗಡೆಗೆ ತಿರುಗಿಸಿದ್ದರಿಂದ ಮುಂಭಾಗದ ದರೆಗೆ ಬಡಿದು ಪಲ್ಟಿಯಾಗಿದೆ. ಬಸ್ನಲ್ಲಿ ಶಾಲಾ -ಕಾಲೇಜು ವಿದ್ಯಾರ್ಥಿಗಳು, ಕೆಲಸದಿಂದ ಮನೆಗೆ ಬರುವವರೇ ಹೆಚ್ಚಾಗಿದ್ದು ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ವೇಳೆ ಬಸ್ ಎಡಗಡೆಗೆ ಚಲಿಸಿದ್ದರೆ ಆಳವಾದ ಕಂದಕಕ್ಕೆ ಉರುಳಿ ಬೀಳುವ ಸಾಧ್ಯತೆ ಇತ್ತು. ಆಳಕ್ಕೆ ಇಳಿದಿದ್ದರೆ ಅಷ್ಟೂ ಜನ ಪ್ರಯಾಣಿಕರು ಅಪಾಯಕ್ಕೆ ಸಿಲುಕುತ್ತಿದ್ದರು. ಸುಮಾರು ಒಂದೂವರೆ ಗಂಟೆಯಷ್ಟು ಈ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಜ್ಪೆ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು. ಎರಡು ಕ್ರೇನ್ ಮೂಲಕ ಬಸ್ಸನ್ನು ಮೇಲಕ್ಕೆತ್ತಲಾಯಿತು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…