ಮಂಗಳೂರು, : ನಗರದ ಹೊರವಲಯದ ಗುರುಪುರ ವ್ಯಾಪ್ತಿಯಲ್ಲಿನ 14 ವರ್ಷದ ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರನ್ನು ಮಂಗಳೂರು ಪೊಲೀಸರು ಶನಿವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಪೊಳಲಿ ನಿವಾಸಿ ಮುಹಮ್ಮದ್ ಮುನೀರ್ (28), ಕೈಕಂಬ ನಿವಾಸಿಗಳಾದ ತಸ್ವಿನ್ ಹಾಗೂ ಸಾದಿಕ್ ಬಂಧಿತ ಆರೋಪಿಗಳು.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತ ಮುನೀರ್ ಪ್ರಧಾನ ಆರೋಪಿಯಾಗಿದ್ದು, ಇನ್ನುಳಿದವರು ಆತನಿಗೆ ಸಹಕಾರ ನೀಡಿದ್ದಾರೆ. ಈ ಸಂಬಂಧ ಇನ್ನೂ ಹಲವರನ್ನು ಬಂಧಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.
ಇದನ್ನೂ ಓದಿ :ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24
ಗುರುಪುರ-ಕೈಕಂಬ ಪರಿಸರದಲ್ಲಿ ಶಾಲೆಗೆ ತೆರಳುವ ಮಾರ್ಗದಲ್ಲಿ ಅಲ್ಲಲ್ಲಿ ಯುವಕರ ಗುಂಪು ಇರುತ್ತದೆ. ವಿದ್ಯಾರ್ಥಿನಿಯರು, ಯುವತಿಯರೇ ಇವರ ಟಾರ್ಗೆಟ್. ಆರಂಭದಲ್ಲಿ ಸ್ನೇಹ ಬೆಳೆಸಿ, ತಿಂಡಿ-ತಿನಿಸು ಕೊಡಿಸುವುದು, ಇತರ ವಸ್ತುಗಳನ್ನು ತೋರಿಸಿ ತಮ್ಮ ಬಲೆಗೆ ಹಾಕಿಕೊಳ್ಳುತ್ತಾರೆ. ನಂತರ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನೀಡುತ್ತಿರುವುದು ಕಂಡುಬಂದಿದೆ. ಇದರ ಹಿಂದೆ ದೊಡ್ಡ ಜಾಲವೇ ಇರುವಂತೆ ಕಾಣಿಸುತ್ತಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಪ್ರಕರಣದಲ್ಲಿ ಪ್ರಧಾನ ಆರೋಪಿ ಮುನೀರ್ ಶಾಲೆಯ ಸಮೀಪ ನಿಂತುಕೊಂಡು ಬಾಲಕಿಗೆ ಆಮಿಷವೊಡ್ಡಿ ಸ್ನೇಹ ಬೆಳೆಸಿದ್ದಾನೆ. ವಸ್ತುಗಳನ್ನು ಗಿಫ್ಟ್ ಕೊಡುವ ಮೂಲಕ ಆಕರ್ಷಿಸಿದ್ದಾನೆ. ಕೊನೆಗೆ ಬಾಲಕಿಯಿಂದ ಮೊಬೈಲ್ ನಂಬರ್ ಪಡೆದು ಪ್ರೀತಿಯ ಬಲೆಗೆ ಬೀಳಿಸಿ, ಆಕೆಯ ಖಾಸಗಿ ಫೋಟೊ, ವೀಡಿಯೊಗಳನ್ನು ಪಡೆದುಕೊಂಡಿದ್ದಾನೆ. ಬಳಿಕ ಲೈಂಗಿಕವಾಗಿ ಸಹಕರಿಸದಿದ್ದಲ್ಲಿ ಫೋಟೊ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಹೀಗೆ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದರು.
ಇದನ್ನೂ ಓದಿ :ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24
ಬಾಲಕಿಗೆ ಕಿರುಕುಳ ನೀಡುತ್ತಿರುವುದು ಪೋಷಕರ ಗಮನಕ್ಕೆ ಬಂದ ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯಕ್ಕೆ ಮೂವರ ಬಂಧನವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪೈಕಿ ಮುನೀರ್ ವೃತ್ತಿಯಲ್ಲಿ ಚಾಲಕ. ಉಳಿದವರು ಕೂಡ ಅಪರಾಧದ ಇತಿಹಾಸ ಹೊಂದಿದ್ದಾರೆ ಎಂದರು.
ಸಂತ್ರಸ್ತರು ಮಾಹಿತಿ ನೀಡಲು ಕಮಿಷನರ್ ಮನವಿ: ಗುರುಪುರ ವ್ಯಾಪ್ತಿಯಲ್ಲಿ ಬಾಲಕಿಯರು, ಯುವತಿಯನ್ನು ಗುರಿಯಾಗಿಸಿಕೊಂಡು, ಪುಸಲಾಯಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬೃಹತ್ ಜಾಲ ಇರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನು ಹಲವು ಕಿರುಕುಳ ಪ್ರಕರಣಗಳು ನಡೆದಿರುವ ಶಂಕೆ ಇದೆ. ಸಂತ್ರಸ್ತರು ಮಾಹಿತಿಯನ್ನು ಹಂಚಿಕೊಳ್ಳಬಹುದಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.
ಇದನ್ನೂ ಓದಿ :ಡಿ.ಕೆ.ಶಿ ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ : ಜೆ.ಸಿ.ಮಾಧುಸ್ವಾಮಿ -Vishwanews24
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…