Featured

ಗುರುಪುರ : ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ; ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು : ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ; ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು, : ನಗರದ ಹೊರವಲಯದ ಗುರುಪುರ ವ್ಯಾಪ್ತಿಯಲ್ಲಿನ 14 ವರ್ಷದ ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರನ್ನು ಮಂಗಳೂರು ಪೊಲೀಸರು ಶನಿವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಪೊಳಲಿ ನಿವಾಸಿ ಮುಹಮ್ಮದ್ ಮುನೀರ್ (28), ಕೈಕಂಬ ನಿವಾಸಿಗಳಾದ ತಸ್ವಿನ್ ಹಾಗೂ ಸಾದಿಕ್ ಬಂಧಿತ ಆರೋಪಿಗಳು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತ ಮುನೀರ್ ಪ್ರಧಾನ ಆರೋಪಿಯಾಗಿದ್ದು, ಇನ್ನುಳಿದವರು ಆತನಿಗೆ ಸಹಕಾರ ನೀಡಿದ್ದಾರೆ. ಈ ಸಂಬಂಧ ಇನ್ನೂ ಹಲವರನ್ನು ಬಂಧಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ :ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಗುರುಪುರ-ಕೈಕಂಬ ಪರಿಸರದಲ್ಲಿ ಶಾಲೆಗೆ ತೆರಳುವ ಮಾರ್ಗದಲ್ಲಿ ಅಲ್ಲಲ್ಲಿ ಯುವಕರ ಗುಂಪು ಇರುತ್ತದೆ. ವಿದ್ಯಾರ್ಥಿನಿಯರು, ಯುವತಿಯರೇ ಇವರ ಟಾರ್ಗೆಟ್. ಆರಂಭದಲ್ಲಿ ಸ್ನೇಹ ಬೆಳೆಸಿ, ತಿಂಡಿ-ತಿನಿಸು ಕೊಡಿಸುವುದು, ಇತರ ವಸ್ತುಗಳನ್ನು ತೋರಿಸಿ ತಮ್ಮ ಬಲೆಗೆ ಹಾಕಿಕೊಳ್ಳುತ್ತಾರೆ. ನಂತರ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನೀಡುತ್ತಿರುವುದು ಕಂಡುಬಂದಿದೆ. ಇದರ ಹಿಂದೆ ದೊಡ್ಡ ಜಾಲವೇ ಇರುವಂತೆ ಕಾಣಿಸುತ್ತಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ಪ್ರಧಾನ ಆರೋಪಿ ಮುನೀರ್ ಶಾಲೆಯ ಸಮೀಪ ನಿಂತುಕೊಂಡು ಬಾಲಕಿಗೆ ಆಮಿಷವೊಡ್ಡಿ ಸ್ನೇಹ ಬೆಳೆಸಿದ್ದಾನೆ. ವಸ್ತುಗಳನ್ನು ಗಿಫ್ಟ್ ಕೊಡುವ ಮೂಲಕ ಆಕರ್ಷಿಸಿದ್ದಾನೆ. ಕೊನೆಗೆ ಬಾಲಕಿಯಿಂದ ಮೊಬೈಲ್ ನಂಬರ್ ಪಡೆದು ಪ್ರೀತಿಯ ಬಲೆಗೆ ಬೀಳಿಸಿ, ಆಕೆಯ ಖಾಸಗಿ ಫೋಟೊ, ವೀಡಿಯೊಗಳನ್ನು ಪಡೆದುಕೊಂಡಿದ್ದಾನೆ. ಬಳಿಕ ಲೈಂಗಿಕವಾಗಿ ಸಹಕರಿಸದಿದ್ದಲ್ಲಿ ಫೋಟೊ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಹೀಗೆ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದರು.

ಇದನ್ನೂ ಓದಿ :ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24

ಬಾಲಕಿಗೆ ಕಿರುಕುಳ ನೀಡುತ್ತಿರುವುದು ಪೋಷಕರ ಗಮನಕ್ಕೆ ಬಂದ ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯಕ್ಕೆ ಮೂವರ ಬಂಧನವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪೈಕಿ ಮುನೀರ್ ವೃತ್ತಿಯಲ್ಲಿ ಚಾಲಕ. ಉಳಿದವರು ಕೂಡ ಅಪರಾಧದ ಇತಿಹಾಸ ಹೊಂದಿದ್ದಾರೆ ಎಂದರು.

ಸಂತ್ರಸ್ತರು ಮಾಹಿತಿ ನೀಡಲು ಕಮಿಷನರ್ ಮನವಿ: ಗುರುಪುರ ವ್ಯಾಪ್ತಿಯಲ್ಲಿ ಬಾಲಕಿಯರು, ಯುವತಿಯನ್ನು ಗುರಿಯಾಗಿಸಿಕೊಂಡು, ಪುಸಲಾಯಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬೃಹತ್ ಜಾಲ ಇರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನು ಹಲವು ಕಿರುಕುಳ ಪ್ರಕರಣಗಳು ನಡೆದಿರುವ ಶಂಕೆ ಇದೆ. ಸಂತ್ರಸ್ತರು ಮಾಹಿತಿಯನ್ನು ಹಂಚಿಕೊಳ್ಳಬಹುದಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಇದನ್ನೂ ಓದಿ :ಡಿ.ಕೆ.ಶಿ ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ : ಜೆ.ಸಿ.ಮಾಧುಸ್ವಾಮಿ -Vishwanews24

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

18 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

19 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

21 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

21 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

22 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

22 hours ago