Featured

ಗುರುಪುರ : ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ; ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು : ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ; ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು, : ನಗರದ ಹೊರವಲಯದ ಗುರುಪುರ ವ್ಯಾಪ್ತಿಯಲ್ಲಿನ 14 ವರ್ಷದ ಶಾಲಾ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂವರನ್ನು ಮಂಗಳೂರು ಪೊಲೀಸರು ಶನಿವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ಪೊಳಲಿ ನಿವಾಸಿ ಮುಹಮ್ಮದ್ ಮುನೀರ್ (28), ಕೈಕಂಬ ನಿವಾಸಿಗಳಾದ ತಸ್ವಿನ್ ಹಾಗೂ ಸಾದಿಕ್ ಬಂಧಿತ ಆರೋಪಿಗಳು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತ ಮುನೀರ್ ಪ್ರಧಾನ ಆರೋಪಿಯಾಗಿದ್ದು, ಇನ್ನುಳಿದವರು ಆತನಿಗೆ ಸಹಕಾರ ನೀಡಿದ್ದಾರೆ. ಈ ಸಂಬಂಧ ಇನ್ನೂ ಹಲವರನ್ನು ಬಂಧಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ :ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಗುರುಪುರ-ಕೈಕಂಬ ಪರಿಸರದಲ್ಲಿ ಶಾಲೆಗೆ ತೆರಳುವ ಮಾರ್ಗದಲ್ಲಿ ಅಲ್ಲಲ್ಲಿ ಯುವಕರ ಗುಂಪು ಇರುತ್ತದೆ. ವಿದ್ಯಾರ್ಥಿನಿಯರು, ಯುವತಿಯರೇ ಇವರ ಟಾರ್ಗೆಟ್. ಆರಂಭದಲ್ಲಿ ಸ್ನೇಹ ಬೆಳೆಸಿ, ತಿಂಡಿ-ತಿನಿಸು ಕೊಡಿಸುವುದು, ಇತರ ವಸ್ತುಗಳನ್ನು ತೋರಿಸಿ ತಮ್ಮ ಬಲೆಗೆ ಹಾಕಿಕೊಳ್ಳುತ್ತಾರೆ. ನಂತರ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನೀಡುತ್ತಿರುವುದು ಕಂಡುಬಂದಿದೆ. ಇದರ ಹಿಂದೆ ದೊಡ್ಡ ಜಾಲವೇ ಇರುವಂತೆ ಕಾಣಿಸುತ್ತಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ಪ್ರಧಾನ ಆರೋಪಿ ಮುನೀರ್ ಶಾಲೆಯ ಸಮೀಪ ನಿಂತುಕೊಂಡು ಬಾಲಕಿಗೆ ಆಮಿಷವೊಡ್ಡಿ ಸ್ನೇಹ ಬೆಳೆಸಿದ್ದಾನೆ. ವಸ್ತುಗಳನ್ನು ಗಿಫ್ಟ್ ಕೊಡುವ ಮೂಲಕ ಆಕರ್ಷಿಸಿದ್ದಾನೆ. ಕೊನೆಗೆ ಬಾಲಕಿಯಿಂದ ಮೊಬೈಲ್ ನಂಬರ್ ಪಡೆದು ಪ್ರೀತಿಯ ಬಲೆಗೆ ಬೀಳಿಸಿ, ಆಕೆಯ ಖಾಸಗಿ ಫೋಟೊ, ವೀಡಿಯೊಗಳನ್ನು ಪಡೆದುಕೊಂಡಿದ್ದಾನೆ. ಬಳಿಕ ಲೈಂಗಿಕವಾಗಿ ಸಹಕರಿಸದಿದ್ದಲ್ಲಿ ಫೋಟೊ, ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಹೀಗೆ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದರು.

ಇದನ್ನೂ ಓದಿ :ಸಿಡಿ ಪ್ರಕರಣ : ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ : ಬಸವರಾಜ ಬೊಮ್ಮಾಯಿ -Vishwanews24

ಬಾಲಕಿಗೆ ಕಿರುಕುಳ ನೀಡುತ್ತಿರುವುದು ಪೋಷಕರ ಗಮನಕ್ಕೆ ಬಂದ ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯಕ್ಕೆ ಮೂವರ ಬಂಧನವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪೈಕಿ ಮುನೀರ್ ವೃತ್ತಿಯಲ್ಲಿ ಚಾಲಕ. ಉಳಿದವರು ಕೂಡ ಅಪರಾಧದ ಇತಿಹಾಸ ಹೊಂದಿದ್ದಾರೆ ಎಂದರು.

ಸಂತ್ರಸ್ತರು ಮಾಹಿತಿ ನೀಡಲು ಕಮಿಷನರ್ ಮನವಿ: ಗುರುಪುರ ವ್ಯಾಪ್ತಿಯಲ್ಲಿ ಬಾಲಕಿಯರು, ಯುವತಿಯನ್ನು ಗುರಿಯಾಗಿಸಿಕೊಂಡು, ಪುಸಲಾಯಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬೃಹತ್ ಜಾಲ ಇರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನು ಹಲವು ಕಿರುಕುಳ ಪ್ರಕರಣಗಳು ನಡೆದಿರುವ ಶಂಕೆ ಇದೆ. ಸಂತ್ರಸ್ತರು ಮಾಹಿತಿಯನ್ನು ಹಂಚಿಕೊಳ್ಳಬಹುದಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಇದನ್ನೂ ಓದಿ :ಡಿ.ಕೆ.ಶಿ ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ : ಜೆ.ಸಿ.ಮಾಧುಸ್ವಾಮಿ -Vishwanews24

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

8 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

9 hours ago