Featured

ಗುರುವನ್ನ ಮೀರಿಸಿದ ಶಿಷ್ಯನಾಗಿರುವುದು ಅತ್ಯಂತ ಸಂತಸ ತಂದಿದೆ: ಡಾ: ಡಿ .ವಿರೇಂದ್ರ ಹೆಗ್ಗಡೆ

ಮಂಗಳೂರು, : ಪ್ರಗತಿಪರ ರಾಷ್ಟ್ರಗಳಲ್ಲಿ ಸಹಕಾರಿ ತತ್ವಕ್ಕಿಂತ ಒಳ್ಳೆಯ ತತ್ವ ಬೇರಿಲ್ಲ. ಸಹಕಾರಿ ತತ್ವದಲ್ಲಿ ಮಾತ್ರವೇ ಸಮಾಜದ ಕಟ್ಟಕಡೆಯ ವ್ಯಕಿಯೂ ಸಂಘದ ಸದಸ್ಯನಾಗಿ ವ್ಯವಹಾರದಲ್ಲಿ ತೊಡಗಿಸಿಕೊಂಡು ಸಾಧನೆಯನ್ನು ಮಾಡಲು ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಅವರು ಇಂದು ನೆಹರೂ ಮೈದಾನದ ಮೊಳಹಳ್ಳಿ ಶಿವರಾಯ ಸಭಾಂಗಣದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಿರಂತರ 25 ವರ್ಷಗಳ ಸಾರ್ಥಕ ಅಧ್ಯಕ್ಷತೆಯನ್ನು ಪೂರೈಸಿ ರಜತ ಸಂಭ್ರಮದಲ್ಲಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರವರಿಗೆ ‘ಸಹಕಾರ ಭೂಷಣ’ ಬಿರುದು ಪ್ರದಾನ ಮಾಡಿ ಮಾತನಾಡಿದರು.

ಆರ್ಥಿಕ ಚೈತನ್ಯಕ್ಕೆ ಸಹಕಾರಿ ತತ್ವ ಉತ್ತಮ ತಳಹದಿ. ಈ ಕ್ಷೇತ್ರದಿಂದ ಆರ್ಥಿಕ ಸುಧಾರಣೆ ಸಾಧ್ಯ ಎಂದು ಅವರು ಹೇಳಿದರು. ಸಹಕಾರಿ ಕ್ಷೇತ್ರದ ತತ್ವದ ವಿಜೃಂಭಣೆಯ ಕಾರ್ಯಕ್ರಮವಾಗಿ ಇಂದು ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ಶ್ಲಾಘಿಸಿದ ಅವರು, ಡಾ. ರಾಜೇಂದ್ರ ಕುಮಾರ್ ಸಹಕಾರಿ ರಂಗಕ್ಕೆ ಶಕ್ತಿಯನ್ನು ತುಂಬಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಕಾರಿ ಕ್ಷೇತ್ರವನ್ನು ಇತ್ತೀಚೆಗೆ ಪ್ರವೇಶಿಸಿದವರು ನಿರ್ಲಕ್ಷ ತೋರದೆ, ಸಂಘ ಚಿಕ್ಕದಾಗಿದ್ದರೂ, ಕಡಿಮೆ ವ್ಯವಹಾರವಿದ್ದರೂ ಅದನ್ನು ಬಲಪಡಿಸುವಲ್ಲಿ ಶ್ರಮಿಸಬೇಕು. ತಮ್ಮ ಊರಿನ ಸಂಘಗಳನ್ನು ಶ್ರದ್ಧಾ ಮನೋಭಾವದ ಸಮರ್ಪಣೆಯೊಂದಿಗೆ ಮುನ್ನಡೆಸಬೇಕು ಎಂದು ಅವರು ಸಹಕಾರಿಗಳಿಗೆ ಕಿವಿಮಾತು ಹೇಳಿದರು.

ಸ್ವಸಹಾಯ ಸಂಘಗಳು ಹಾಗೂ ನವೋದಯ ಗುಂಪುಗಳಿಂದಾಗಿ ಇಂದು ಮಹಿಳೆಯರ ಸಬಲೀಕರಣವಾಗಿದೆ. ವ್ಯವಹಾರ ಜ್ಞಾನವೇ ಸಾಕ್ಷರತೆಯ ಮೂಲ ಉದ್ದೇಶವಾಗಿದ್ದು, ಅಕ್ಷರ ಜ್ಞಾನ ಇಲ್ಲದ ಮಹಿಳೆಯರು ಕೂಡಾ ವ್ಯಾವಹಾರಿಕವಾಗಿ ಇಂದು ಸಶಕ್ತರಾಗಿದ್ದಾರೆ. ಜೀವನ ಪರೀಕ್ಷೆಯನ್ನು ಎದುರಿಸುವ ಶಕ್ತಿಯನ್ನು ಸ್ವಸಹಾಯ ಗುಂಪುಗಳು ನೀಡಿವೆ ಎಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಕೇಂದ್ರದ ರಾಸಾಯನಿಕ, ರಸಗೊಬ್ಬರ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯದ ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ್, ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ತು ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ, ಸಂಸದ ನಳಿನ್‌ ಕುಮಾರ್ ಕಟೀಲು, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್.ಭೋಜೇಗೌಡ, ಕೆ. ಹರೀಶ್‌ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಮೊದಾಲಾದವರು ಅತಿಥಿಗಳಾಗಿ ಪಾಲ್ಗೊಂಡರು.

ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಕಾರ್ಯಾಧ್ಯಕ್ಷರಾದ ಭಾಸ್ಕರ ಎಸ್.ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಭಿನಂದನಾ ಸಮಿತಿಯ ಅಧ್ಯಕ್ಷ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ವಂದಿಸಿದರು.

ಸಹಕಾರಿ ಧುರೀಣರಿಂದ ಸಮೀಕ್ಷೆಯಾಗಲಿ !

ದ.ಕ. ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ, ಸ್ವಸಹಾಯ ಸಂಘಗಳು ಯಶಸ್ಸು ಕಾಣಲು ಸಾಧ್ಯವಾಗಿರುವ ಬಗ್ಗೆ ರಾಜ್ಯ ಸರಕಾರವು ಇತರ ಜಿಲ್ಲೆಗಳ ಸಹಕಾರಿ ಧುರೀಣರನ್ನು ಜಿಲ್ಲೆಗೆ ಕಳುಹಿಸಿ ಸಮೀಕ್ಷೆ ನಡೆಸಿ, ಇಲ್ಲಿನ ಯಶಸ್ಸನ್ನು ಇತರ ಜಿಲ್ಲೆಗಳಿಗೂ ವ್ಯಾಪಿಸಬೇಕು ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಸಲಹೆ ನೀಡಿದರು.

ಗುರುವನ್ನು ಮೀರಿದ ಶಿಷ್ಯ ಡಾ. ರಾಜೇಂದ್ರ ಕುಮಾರ್

ಡಾ. ರಾಜೇಂದ್ರ ಕುಮಾರ್‌ರವರು ನನ್ನನ್ನು ಗುರುವಿನ ಸ್ಥಾನದಲ್ಲಿರಿಸಿ ಗೌರವ ನೀಡುತ್ತಾರೆ. ಆದರೆ ಅವರು ಗುರುವನ್ನು ಮೀರಿಸಿದ ಶಿಷ್ಯನಾಗಿ ಬೆಳೆದಿದ್ದಾರೆ. ಹಾಗಾಗಿ ಅವರು ನನ್ನನ್ನು ಗುರು ಎಂದು ಹೇಳುವಾಗ ನನಗೆ ಸಂತವಾಗುತ್ತದೆ. ಅವರ ಯಶಸ್ಸು ನನಗೆ ಖುಷಿ ಕೊಡುತ್ತದೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಾ. ರಾಜೇಂದ್ರ ಕುಮಾರ್ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದರು.

ನೆಹರೂ ಮೈದಾನದಲ್ಲಿ ಸಭಾ ಕಾರ್ಯಕ್ರಮಕ್ಕೆ ಮುಂಚಿತವಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಹೊರಟ ಬೃಹತ್ ಮೆರವಣಿಗೆಯನ್ನು ಉದ್ಘಾಟಿಸಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸಭೆಯಲ್ಲಿ ಮಾತನಾಡಿ, ಓಟಿನ ಬೇಟೆಗಾಗಿ ಯೋಜನೆಗಳ ರೂಪದ ತಾತ್ಕಾಲಿಕ ವ್ಯವಸ್ಥೆಯ ಬದಲು ಶಾಶ್ವತ ವ್ಯವಸ್ಥೆ ಯನ್ನು ಡಾ. ವೀರೇಂದ್ರ ಹೆಗ್ಗಡೆ, ಡಾ. ರಾಜೇಂದ್ರ ಕುಮಾರ್ ಮಾಡಿದ ಕಾರಣವಾಗಿಯೇ ಅವರು ಈ ರೀತಿಯ ಯಶಸ್ಸು ಪಡೆಯಲು ಕಾರಣವಾಗಿದೆ ಎಂದರು.

ರಾಜಕಾರಣಿಗಳಿಗೆ ನಡುಕ ಬರುವ ಸಮಾವೇಶ !

ರಾಜಕಾರಣಿಗಳಿಗೆ ನಡುಕ ಬರುವ ರೀತಿಯಲ್ಲಿ ಸಮಾವೇಶ ನಡೆಯುತ್ತಿದೆ. ಅಧಿಕಾರವೇ ಸವೋಚ್ಛ ಎಂಬ ರಾಜಕೀಯ ವ್ಯವಸ್ಥೆಯ ನಡುವೆ ಸಹಕಾರಿ ರಂಗ ಅದನ್ನೂ ಮೀರಿ ಬೆಳೆದು ಚರ್ಚೆಗೆ ಗ್ರಾಸವಾಗಿದೆ. ರಾಜಕಾರಣಿಗಳು ಗೆದ್ದಾಗ ಆರಂಭದಲ್ಲಿ ಅಭಿನಂದನೆ ಸಿಗುತ್ತದೆ. ಆದರೆ ಬಳಿಕ ಅವರು ಯಾವ ಅಭಿನಂದನೆಗೂ ಅರ್ಹರೇ ಅಲ್ಲವಾಗಿ ಬಿಡುತ್ತಾರೆ. ಆದರೆ ಡಾ. ರಾಜೇಂದ್ರ ಕುಮಾರ್ ಅವರು ತಮ್ಮ 25 ವರ್ಷಗಳ ಸಾಧನೆಗಾಗಿ ಈ ಅಭಿನಂದನೆಯನ್ನು ಸ್ವೀಕರಿಸುತ್ತಿದ್ದಾರೆ. ಇದು ಅವಿಸ್ಮರಣೀಯ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ, ಸಾಂಖ್ಯಿಕ ಮತ್ತು ಯೋಜನೆಗಳ ಜಾರಿ ಇಲಾಖಾ ಸಚಿವ ಡಿ.ವಿ. ಸದಾನಂದ ಗೌಡ ಅಭಿಪ್ರಾಯಿಸಿದರು.

Vishwa News 24

Recent Posts

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

58 seconds ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

49 minutes ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

1 hour ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

2 hours ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

2 hours ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

2 hours ago