Featured

ಗುರುವನ್ನ ಮೀರಿಸಿದ ಶಿಷ್ಯನಾಗಿರುವುದು ಅತ್ಯಂತ ಸಂತಸ ತಂದಿದೆ: ಡಾ: ಡಿ .ವಿರೇಂದ್ರ ಹೆಗ್ಗಡೆ

ಮಂಗಳೂರು, : ಪ್ರಗತಿಪರ ರಾಷ್ಟ್ರಗಳಲ್ಲಿ ಸಹಕಾರಿ ತತ್ವಕ್ಕಿಂತ ಒಳ್ಳೆಯ ತತ್ವ ಬೇರಿಲ್ಲ. ಸಹಕಾರಿ ತತ್ವದಲ್ಲಿ ಮಾತ್ರವೇ ಸಮಾಜದ ಕಟ್ಟಕಡೆಯ ವ್ಯಕಿಯೂ ಸಂಘದ ಸದಸ್ಯನಾಗಿ ವ್ಯವಹಾರದಲ್ಲಿ ತೊಡಗಿಸಿಕೊಂಡು ಸಾಧನೆಯನ್ನು ಮಾಡಲು ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಅವರು ಇಂದು ನೆಹರೂ ಮೈದಾನದ ಮೊಳಹಳ್ಳಿ ಶಿವರಾಯ ಸಭಾಂಗಣದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಿರಂತರ 25 ವರ್ಷಗಳ ಸಾರ್ಥಕ ಅಧ್ಯಕ್ಷತೆಯನ್ನು ಪೂರೈಸಿ ರಜತ ಸಂಭ್ರಮದಲ್ಲಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರವರಿಗೆ ‘ಸಹಕಾರ ಭೂಷಣ’ ಬಿರುದು ಪ್ರದಾನ ಮಾಡಿ ಮಾತನಾಡಿದರು.

ಆರ್ಥಿಕ ಚೈತನ್ಯಕ್ಕೆ ಸಹಕಾರಿ ತತ್ವ ಉತ್ತಮ ತಳಹದಿ. ಈ ಕ್ಷೇತ್ರದಿಂದ ಆರ್ಥಿಕ ಸುಧಾರಣೆ ಸಾಧ್ಯ ಎಂದು ಅವರು ಹೇಳಿದರು. ಸಹಕಾರಿ ಕ್ಷೇತ್ರದ ತತ್ವದ ವಿಜೃಂಭಣೆಯ ಕಾರ್ಯಕ್ರಮವಾಗಿ ಇಂದು ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ಶ್ಲಾಘಿಸಿದ ಅವರು, ಡಾ. ರಾಜೇಂದ್ರ ಕುಮಾರ್ ಸಹಕಾರಿ ರಂಗಕ್ಕೆ ಶಕ್ತಿಯನ್ನು ತುಂಬಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಕಾರಿ ಕ್ಷೇತ್ರವನ್ನು ಇತ್ತೀಚೆಗೆ ಪ್ರವೇಶಿಸಿದವರು ನಿರ್ಲಕ್ಷ ತೋರದೆ, ಸಂಘ ಚಿಕ್ಕದಾಗಿದ್ದರೂ, ಕಡಿಮೆ ವ್ಯವಹಾರವಿದ್ದರೂ ಅದನ್ನು ಬಲಪಡಿಸುವಲ್ಲಿ ಶ್ರಮಿಸಬೇಕು. ತಮ್ಮ ಊರಿನ ಸಂಘಗಳನ್ನು ಶ್ರದ್ಧಾ ಮನೋಭಾವದ ಸಮರ್ಪಣೆಯೊಂದಿಗೆ ಮುನ್ನಡೆಸಬೇಕು ಎಂದು ಅವರು ಸಹಕಾರಿಗಳಿಗೆ ಕಿವಿಮಾತು ಹೇಳಿದರು.

ಸ್ವಸಹಾಯ ಸಂಘಗಳು ಹಾಗೂ ನವೋದಯ ಗುಂಪುಗಳಿಂದಾಗಿ ಇಂದು ಮಹಿಳೆಯರ ಸಬಲೀಕರಣವಾಗಿದೆ. ವ್ಯವಹಾರ ಜ್ಞಾನವೇ ಸಾಕ್ಷರತೆಯ ಮೂಲ ಉದ್ದೇಶವಾಗಿದ್ದು, ಅಕ್ಷರ ಜ್ಞಾನ ಇಲ್ಲದ ಮಹಿಳೆಯರು ಕೂಡಾ ವ್ಯಾವಹಾರಿಕವಾಗಿ ಇಂದು ಸಶಕ್ತರಾಗಿದ್ದಾರೆ. ಜೀವನ ಪರೀಕ್ಷೆಯನ್ನು ಎದುರಿಸುವ ಶಕ್ತಿಯನ್ನು ಸ್ವಸಹಾಯ ಗುಂಪುಗಳು ನೀಡಿವೆ ಎಂದು ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಕೇಂದ್ರದ ರಾಸಾಯನಿಕ, ರಸಗೊಬ್ಬರ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯದ ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ್, ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ತು ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ, ಸಂಸದ ನಳಿನ್‌ ಕುಮಾರ್ ಕಟೀಲು, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್.ಭೋಜೇಗೌಡ, ಕೆ. ಹರೀಶ್‌ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಮೊದಾಲಾದವರು ಅತಿಥಿಗಳಾಗಿ ಪಾಲ್ಗೊಂಡರು.

ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಕಾರ್ಯಾಧ್ಯಕ್ಷರಾದ ಭಾಸ್ಕರ ಎಸ್.ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಭಿನಂದನಾ ಸಮಿತಿಯ ಅಧ್ಯಕ್ಷ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ವಂದಿಸಿದರು.

ಸಹಕಾರಿ ಧುರೀಣರಿಂದ ಸಮೀಕ್ಷೆಯಾಗಲಿ !

ದ.ಕ. ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ, ಸ್ವಸಹಾಯ ಸಂಘಗಳು ಯಶಸ್ಸು ಕಾಣಲು ಸಾಧ್ಯವಾಗಿರುವ ಬಗ್ಗೆ ರಾಜ್ಯ ಸರಕಾರವು ಇತರ ಜಿಲ್ಲೆಗಳ ಸಹಕಾರಿ ಧುರೀಣರನ್ನು ಜಿಲ್ಲೆಗೆ ಕಳುಹಿಸಿ ಸಮೀಕ್ಷೆ ನಡೆಸಿ, ಇಲ್ಲಿನ ಯಶಸ್ಸನ್ನು ಇತರ ಜಿಲ್ಲೆಗಳಿಗೂ ವ್ಯಾಪಿಸಬೇಕು ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಸಲಹೆ ನೀಡಿದರು.

ಗುರುವನ್ನು ಮೀರಿದ ಶಿಷ್ಯ ಡಾ. ರಾಜೇಂದ್ರ ಕುಮಾರ್

ಡಾ. ರಾಜೇಂದ್ರ ಕುಮಾರ್‌ರವರು ನನ್ನನ್ನು ಗುರುವಿನ ಸ್ಥಾನದಲ್ಲಿರಿಸಿ ಗೌರವ ನೀಡುತ್ತಾರೆ. ಆದರೆ ಅವರು ಗುರುವನ್ನು ಮೀರಿಸಿದ ಶಿಷ್ಯನಾಗಿ ಬೆಳೆದಿದ್ದಾರೆ. ಹಾಗಾಗಿ ಅವರು ನನ್ನನ್ನು ಗುರು ಎಂದು ಹೇಳುವಾಗ ನನಗೆ ಸಂತವಾಗುತ್ತದೆ. ಅವರ ಯಶಸ್ಸು ನನಗೆ ಖುಷಿ ಕೊಡುತ್ತದೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಾ. ರಾಜೇಂದ್ರ ಕುಮಾರ್ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದರು.

ನೆಹರೂ ಮೈದಾನದಲ್ಲಿ ಸಭಾ ಕಾರ್ಯಕ್ರಮಕ್ಕೆ ಮುಂಚಿತವಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಹೊರಟ ಬೃಹತ್ ಮೆರವಣಿಗೆಯನ್ನು ಉದ್ಘಾಟಿಸಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸಭೆಯಲ್ಲಿ ಮಾತನಾಡಿ, ಓಟಿನ ಬೇಟೆಗಾಗಿ ಯೋಜನೆಗಳ ರೂಪದ ತಾತ್ಕಾಲಿಕ ವ್ಯವಸ್ಥೆಯ ಬದಲು ಶಾಶ್ವತ ವ್ಯವಸ್ಥೆ ಯನ್ನು ಡಾ. ವೀರೇಂದ್ರ ಹೆಗ್ಗಡೆ, ಡಾ. ರಾಜೇಂದ್ರ ಕುಮಾರ್ ಮಾಡಿದ ಕಾರಣವಾಗಿಯೇ ಅವರು ಈ ರೀತಿಯ ಯಶಸ್ಸು ಪಡೆಯಲು ಕಾರಣವಾಗಿದೆ ಎಂದರು.

ರಾಜಕಾರಣಿಗಳಿಗೆ ನಡುಕ ಬರುವ ಸಮಾವೇಶ !

ರಾಜಕಾರಣಿಗಳಿಗೆ ನಡುಕ ಬರುವ ರೀತಿಯಲ್ಲಿ ಸಮಾವೇಶ ನಡೆಯುತ್ತಿದೆ. ಅಧಿಕಾರವೇ ಸವೋಚ್ಛ ಎಂಬ ರಾಜಕೀಯ ವ್ಯವಸ್ಥೆಯ ನಡುವೆ ಸಹಕಾರಿ ರಂಗ ಅದನ್ನೂ ಮೀರಿ ಬೆಳೆದು ಚರ್ಚೆಗೆ ಗ್ರಾಸವಾಗಿದೆ. ರಾಜಕಾರಣಿಗಳು ಗೆದ್ದಾಗ ಆರಂಭದಲ್ಲಿ ಅಭಿನಂದನೆ ಸಿಗುತ್ತದೆ. ಆದರೆ ಬಳಿಕ ಅವರು ಯಾವ ಅಭಿನಂದನೆಗೂ ಅರ್ಹರೇ ಅಲ್ಲವಾಗಿ ಬಿಡುತ್ತಾರೆ. ಆದರೆ ಡಾ. ರಾಜೇಂದ್ರ ಕುಮಾರ್ ಅವರು ತಮ್ಮ 25 ವರ್ಷಗಳ ಸಾಧನೆಗಾಗಿ ಈ ಅಭಿನಂದನೆಯನ್ನು ಸ್ವೀಕರಿಸುತ್ತಿದ್ದಾರೆ. ಇದು ಅವಿಸ್ಮರಣೀಯ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ, ಸಾಂಖ್ಯಿಕ ಮತ್ತು ಯೋಜನೆಗಳ ಜಾರಿ ಇಲಾಖಾ ಸಚಿವ ಡಿ.ವಿ. ಸದಾನಂದ ಗೌಡ ಅಭಿಪ್ರಾಯಿಸಿದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

17 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

17 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

17 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

18 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

18 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

19 hours ago