ಉಡುಪಿ(18ಜೂ/2020): ಭಾರತ ಚೀನಾ ಗಡಿಯ ಗಾಲ್ವಾನ್ ಪ್ರದೇಶದಲ್ಲಿ ಚೀನಾ ಸೈನಿಕರ ದಾಳಿಗೆ ತುತ್ತಾಗಿ ವೀರ ಮರಣವಪ್ಪಿದ ಭಾರತೀಯ ಸೇನೆಯ ಇಪ್ಪತ್ತು ಸೈನಿಕರ ಗೌರವಾರ್ಥವಾಗಿ ಗುರೂಜಿ ಸಾಯಿಈಶ್ವರ್ ಇಂದು ಉಡುಪಿಯ ಹುತಾತ್ಮ ಸೈನಿಕರ ಯುದ್ಧ ಸ್ಮಾರಕಕ್ಕೆ ಬೇಟಿ ನೀಡಿ ಗೌರವ
ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗುರೂಜಿ ಸಾಯಿ ಈಶ್ವರ್ “ಗಡಿಯಲ್ಲಿ ವೀರ ಮರಣವನ್ನಪ್ಪಿದ ನಮ್ಮ ಸೈನಿಕರ ಸಾವು ವ್ಯರ್ಥವಾಗ ಬಾರದು.ನಮ್ಮಿಂದ ಯುದ್ದದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಆದರೆ ಇನ್ನು ಮುಂದೆ ಚೀನಾ ವಸ್ತುಗಳನ್ನು ಖರೀದಿಸುವುದನ್ನು ನಿಲ್ಲಿಸುವ, ಚೀನಾ ದೇಶಕ್ಕೆ ಆರ್ಥಿಕ ಹಿನ್ನಡೆ ತಂದು ಪರೋಕ್ಷವಾಗಿ ಆರ್ಥಿಕ ಯುದ್ಧ ಮಾಡಲು ಸಿದ್ದರಾಗಿ” ಎಂದು ಯುವ ಜನತೆಗೆ ಕರೆ ನೀಡಿದರು.
ಶಂಕರಪುರದ ದ್ವಾರಕಾಮಾಹಿ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ಪ್ರತಿವರ್ಷ ಉಡುಪಿಯ ಹಾಲಿ ಹಾಗು ಮಾಜಿ ಸೈನಿಕರನ್ನು ಗುರುತಿಸಿ ಸೈನಿಕ ದಂಪತಿಗಳನ್ನು ಮಂದಿರಕ್ಕೆ ಕರೆಸಿ ಧುನಿ ಯಾಗ ಮಾಡುತ್ತಿದ್ದು ಈ ವರ್ಷ ಕರೋನಾ ಲಾಕ್ ಡೌನ್ ಕಾರಣ ಧುನಿ ಯಾಗ ಆಯೋಜನೆ ಮಾಡಿರುವುದಿಲ್ಲ.
ಉಡುಪಿ ಹಿಂದೂ ಸಂಘಟಕ ರಾಧಾಕೃಷ್ಣ ಮೆಂಡನ್ ಮಾತನಾಡಿ “ನಮ್ಮ ಸೈನಿಕರನ್ನು ಮೋಸದಿಂದ ಕೊಲ್ಲಲಾಯಿತು, ಆದರೆ ಪ್ರತ್ಯುತ್ತರವಾಗಿ ನಮ್ಮ ತಕ್ಕ ಉತ್ತರ ನೀಡಿದ್ದಾರೆ.ಮೃತ ಯೋಧರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ” ಎಂದು ನುಡಿದರು.
ಈ ಸಂದರ್ಭದಲ್ಲಿ ಪರ್ಕಳದ ಲಯನ್ಸ್ ಕ್ಲಬಿನ ಅಧ್ಯಕ್ಷರಾದ ಜಯರಾಮ್ ಜಿ, ಮ್ಯಾಕ್ಸ್ ಸೌಂಡ್ಸ್ ಇದರ ಮಾಲಕರಾದ ಗಣೇಶ್ ಪಾಲನ್, ದ್ವಾರಕಾಮಾಹಿ ಶ್ರೀ ಸಾಯಿ ಬಾಬಾ ಮಂದಿರದ ಮೇಲ್ವಿಚಾರಕ ಸತೀಶ್ ದೇವಾಡಿಗ,ಅಮಿತ್ ಬಜಪೆ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…