ಕಾಪು : ತಾಲೂಕಿನ ಗುರ್ಮೆ ಫೌಂಡೇಶನ್ ಪದ್ಮಶ್ರೀ, ಕಳತ್ತೂರು ಗುರ್ಮೆ, ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ ಪ್ರಯುಕ್ತ ಗುರ್ಮೆ ಗೋ ವಿಹಾರ ಲೋಕಾರ್ಪಣೆಯು ಫೆಬ್ರವರಿ 20 ರಂದು ಸಂಜೆ 4 ಗಂಟೆಗೆ ಕಳತ್ತೂರು ಗುರ್ಮೆ ಇಲ್ಲಿ ಜರಗಲಿದೆ ಎಂದು ಫೌಂಡೇಶನ್ ಪ್ರವರ್ತಕ ಗುರ್ಮೆ ಸುರೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ ಸಂಜೆ 4ಕ್ಕೆ ಶ್ರೀಕಾಂತ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ ಮತ್ತು ಬಳಗ ಮಂಗಳೂರು ಇವರಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ಸಂಜೆ 4:30 ಕ್ಕೆ ಸಭಾಕಾರ್ಯಕ್ರಮ, 6:30 ಕ್ಕೆ ಭಜನಾ ಸಂಕೀರ್ತನೆ, 8 ರಿಂದ ಶ್ರೀಗುರು ನರಸಿಂಹ ದಶಾವತಾರ ಯಕ್ಷಗಾನ ಮಂಡಳಿ ಸಾಲಿಗ್ರಾಮ ಇವರಿಂದ ದಕ್ಷಯಜ್ಞ – ರಾಜಾ ರುದ್ರಕೋಪ ಎಂಬ ಕಾಲಮಿತಿ ಯಕ್ಷಗಾನ ಬಯಲಾಟ ಜರಗಲಿದೆ.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದು, ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಸ್ವರ್ಣ ಪೀಠಿಕಾಪುರ ಗೌರಿ ಗದ್ದೆಯ ವಿನಯ ಗುರೂಜಿ, ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬೆಂಗಳೂರು ಎಂಆರ್ ಜಿ ಗ್ರೂಪ್ ಚೆಯರ್ರ್ಮನ್ ಕೆ. ಪ್ರಕಾಶ್ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರವರ್ತಕರಾದ ಸತೀಶ್ ಪಿ ಶೆಟ್ಟಿ ಗುರ್ಮೆ,ಕೆ.ಪಿ ಶೆಟ್ಟಿ, ಶ್ಯಾಮ್ ಶೆಟ್ಟಿ, ಪೈಯ್ಯಾರು ಗಣೇಶ್ ಶೆಟ್ಟಿ, ಪೈಯ್ಯಾರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …