ಕಾಪು: ಬಿಜೆಪಿ ರಾಷ್ಟ್ರ , ರಾಜ್ಯ ಮತ್ತು ಜಿಲ್ಲೆ ನಾಯಕರ ಶಿಫಾರಸ್ಸಿನ ಮೇರೆಗೆ ಕಾಪು ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ನೇಮಕಗೊಂಡಿದ್ದಾರೆ.
ಉದ್ಯಮ ಮತ್ತು ಸಮಾಜಸೇವಕರಾಗಿರುವ ಅವರು 2014 ರಲ್ಲಿ ಬಿಜೆಪಿ ಗೆ ಸೇರ್ಪಡೆ ಗೊಂಡಿದ್ದರು.ಕಳೆದ ಲೋಕಸಭೆ,ಗ್ರಾಮಪಂಚಾಯತ್, ತಾ.ಪಂ ಮತ್ತು ಜಿ.ಪಂ ಚುನಾವಣೆ ಹಾಗೂ ಕಾಪು ಪುರಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ವಿಶೇಷ ಪ್ರಯತ್ನ ನಡೆಸಿದ್ದ ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಗಿ , ಕಾಪು ಕ್ಷೇತ್ರ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವಿಧಾನಸಭಾ ಚುನಾವಣೆಯ ಕಾಪು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಕೊನೆ ಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದು ಇದರಿಂದ ಪಕ್ಷದ ಮುಖಂಡರು, ಕಾರ್ಯಕರ್ತರು , ಅಭಿಮಾನಿಗಳು ನಿರಾಸೆಗೊಳಗಾಗಿದ್ದರು.
ಆದರೆ ಇದೀಗ ಸುರೇಶ್ ಶೆಟ್ಟಿ ಗುರ್ಮೆ ಅವರಿಗೆ ಪಕ್ಷದ ಮಹತ್ವದ ಜವಾಬ್ದಾರಿಯನ್ನು ನೀಡಿದ್ದು, ಅವರು ಬಿಜೆಪಿ ಅಭ್ಯರ್ಥಿ ಲಾಲಜಿ ಆರ್. ಮೆಂಡನ್ ಅವರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…