ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ಘೋಷಿಸಿರುವುದು ಪಕ್ಷದಲ್ಲಿ ಆಂತರಿಕ ಭಿನ್ನಮತಕ್ಕೆ ಕಾರಣವಾಗಿದೆ.
ಪದ್ಮ ಪ್ರಶಸ್ತಿ ಘೋಷಣೆ ವಿಚಾರವನ್ನು ಕಾಂಗ್ರೆಸ್ ನಾಯಕರು ಬಹಿರಂಗವಾಗಿ ವಿರೋಧಿಸಿಲ್ಲವಾದರೂ, ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಟ್ವೀಟ್ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ. ಅದೇ ಟ್ವೀಟ್ನಲ್ಲಿ, ಅವರ ಸಾರ್ವಜನಿಕ ಸೇವೆಯನ್ನು ರಾಷ್ಟ್ರ ಗುರುತಿಸಿದೆ, ಕಾಂಗ್ರೆಸ್ಗೆ ಅವರ ಸೇವೆ ಬೇಕಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ :
ಪಶ್ಮಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಜಿ ಅವರು ಪದ್ಮ ಭೂಷಣ ಪ್ರಶಸ್ತಿ ನಿರಾಕರಿಸಿದ್ದಾರೆ. ಈ ವಿಚಾರವನ್ನು ಅರವಿಂದ್ ಗುಣಶೇಖರ್ ಟ್ವೀಟ್ ಮಾಡಿದ್ದಾರೆ. ಅರವಿಂದ್ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಜೈರಾಮ್ ರಮೇಶ್, ಬುದ್ಧದೇವ್ ಅವರು ಸರಿಯಾದುದನ್ನೇ ಮಾಡಿದ್ದಾರೆ, ಅವರಿಗೆ ಆಜಾದಿ ಬೇಕಾಗಿದೆ. ಗುಲಾಮಗಿರಿಯಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಹೀಗೆ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ಘೋಷಿಸಿರುವ ವಿಚಾರ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಿಗೆ ಅಸಮಾಧಾನ ಉಂಟುಮಾಡಿದೆ.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…