ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ಘೋಷಿಸಿರುವುದು ಪಕ್ಷದಲ್ಲಿ ಆಂತರಿಕ ಭಿನ್ನಮತಕ್ಕೆ ಕಾರಣವಾಗಿದೆ.
ಪದ್ಮ ಪ್ರಶಸ್ತಿ ಘೋಷಣೆ ವಿಚಾರವನ್ನು ಕಾಂಗ್ರೆಸ್ ನಾಯಕರು ಬಹಿರಂಗವಾಗಿ ವಿರೋಧಿಸಿಲ್ಲವಾದರೂ, ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಟ್ವೀಟ್ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ. ಅದೇ ಟ್ವೀಟ್ನಲ್ಲಿ, ಅವರ ಸಾರ್ವಜನಿಕ ಸೇವೆಯನ್ನು ರಾಷ್ಟ್ರ ಗುರುತಿಸಿದೆ, ಕಾಂಗ್ರೆಸ್ಗೆ ಅವರ ಸೇವೆ ಬೇಕಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ :
ಪಶ್ಮಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಜಿ ಅವರು ಪದ್ಮ ಭೂಷಣ ಪ್ರಶಸ್ತಿ ನಿರಾಕರಿಸಿದ್ದಾರೆ. ಈ ವಿಚಾರವನ್ನು ಅರವಿಂದ್ ಗುಣಶೇಖರ್ ಟ್ವೀಟ್ ಮಾಡಿದ್ದಾರೆ. ಅರವಿಂದ್ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಜೈರಾಮ್ ರಮೇಶ್, ಬುದ್ಧದೇವ್ ಅವರು ಸರಿಯಾದುದನ್ನೇ ಮಾಡಿದ್ದಾರೆ, ಅವರಿಗೆ ಆಜಾದಿ ಬೇಕಾಗಿದೆ. ಗುಲಾಮಗಿರಿಯಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಹೀಗೆ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ಘೋಷಿಸಿರುವ ವಿಚಾರ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಿಗೆ ಅಸಮಾಧಾನ ಉಂಟುಮಾಡಿದೆ.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…