ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಗೂಗಲ್ ಮ್ಯಾಪ್ ನಂಬಿ ಕುಟುಂಬವೊಂದು ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ ಘಟನೆ ಜಿಲ್ಲೆಯ ಖಾನಾಪುರ ಭೀಮಗಢ ಅರಣ್ಯ ಪ್ರದೇಶಲ್ಲಿ ನಡೆದಿದೆ.
ಬಿಹಾರ ಮೂಲದ ರಣಜಿತದಾಸ್ ಕುಟುಂಬ ಗೋವಾಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಮಧ್ಯೆ ಸಮೀಪ ಗೂಗಲ್ ಮ್ಯಾಪ್ ದಾರಿ ತೋರಿಸಿದೆ. ಮ್ಯಾಪ್ ನಂಬಿ ಭೀಮಗಢ ಅರಣ್ಯದೊಳಗೆ 7-8 ಕಿ.ಮೀ ಬಂದಿದ್ದಾರೆ. ಆಂಧ್ರಪ್ರದೇಶದಿಂದ ಗೋವಾಕ್ಕೆ ಕಾರಿನಲ್ಲಿ ನಾಲ್ವರು ಹೊರಟಿದ್ದರು. ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದಾಗ ದಾರಿ ತಪ್ಪಿ ಫಜೀತಿಗೆ ಒಳಗಾಗಿದ್ದರು. ಮಧ್ಯರಾತ್ರಿ ದಾರಿತಪ್ಪಿ ಕಾರು 10 ಕಿ.ಮೀ ಕಾಳಿನೊಳಗೆ ಹೋಗಿತ್ತು. ರಸ್ತೆ ಮುಗಿದು ಹಳ್ಳ ಬಂದಾಗ ನಾವು ದಾರಿ ತಪ್ಪಿದ್ದೇವೆ ಎಂದು ಅವರಿಗೆ ಅರಿವಾಗಿದೆ.
ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟವರ್ಕ್ ಸಿಗದೇ ಪರದಾಡಿದ್ದಾರೆ. ನಾಲ್ಕು ಕಿಲೋ ಮೀಟರ್ ಹೊರ ಬಂದ ಬಳಿಕ ನೆಟವರ್ಕ್ ಸಿಕ್ಕ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ 112 ಸಿಬ್ಬಂದಿಗೆ ಕರೆ ಮಾಡಿದ್ದರು. ಈ ವೇಳೆ ಚಾಲಕ ಪೊಲೀಸರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]