ಬೆಂಗಳೂರು: ಕಳೆದ ಎರಡ್ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿಲ್ಲ. ಇದಕ್ಕೆ ರಾಜ್ಯದಾದ್ಯಂತ ಮಹಿಳೆಯರು, ಫಲಾನುಭವಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ, ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ದುಡ್ಡು ಬಂದಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಸಚಿವರು ಮಾತ್ರ ಉಡಾಫೆ ಉತ್ತರ ಕೊಟ್ಟಿದ್ದಾರೆ. ಪ್ರತಿ ತಿಂಗಳೂ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ವರ್ಗಾವಣೆ ಮಾಡುತ್ತೇವೆ ಎಂದು ಚುನಾವಣೆಯ ವೇಳೆ ಮಾತು ಕೊಟ್ಟು ಅಧಿಕ್ಕಾರಕ್ಕೇರಿದ್ದರು. ಆದರೆ ಈಗ, ಗೃಹಲಕ್ಷ್ಮಿ ಹಣ ತಿಂಗಳ ತಿಂಗಳ ಸಂಬಳ ಅಲ್ವಲ್ಲಾ ಎಂದು ಜಾರ್ಜ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕೂಡ ಹಾರಿಕೆ ಉತ್ತರ ನೀಡಿದರು. ಸಿಎಂ ಸಿದ್ದರಾಮಯ್ಯ ಯಾವುದೇ ಗ್ಯಾರಂಟಿ ನಿಲ್ಲಿಸಲ್ಲ, ಸದ್ಯದಲ್ಲೇ ಹಣ ಹಾಕುತ್ತೇವೆ ಎಂದು ಭರವಸೆ ಹೇಳಿದರು.
ಈ ನಡುವೆ ಗ್ಯಾರಂಟಿ ನೀಡುತ್ತೇವೆ ಎಂದು ಘೋಷಿಸಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರದ ಸಚಿವರಿಂದ ಇಂತಹ ಬೇಜವಾಬ್ಧಾರಿಯುತ ಉತ್ತರ ಬಂದಿರುವುದಕ್ಕೆ ಸಾರ್ವಜನಿಕಕರಿಂದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…