Featured

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ ವರದಿ ಹೇಳಿದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆ ಯಾವುದೇ ಗೋಲ್‌ಮಾಲ್ ಆಗಿಲ್ಲ ಎಂದು ಡೇಟಾ ಸಮೇತ ಸ್ಪಷ್ಟೀಕರಣ ನೀಡಿದೆ.

ಗೃಹಲಕ್ಷ್ಮಿ ಯೋಜನೆಯ ಒಟ್ಟು 2,88,376 ಫಲಾನುಭವಿಗಳು ಸಾವನ್ನಪ್ಪಿದ್ದಾರೆ. ಆ ಪೈಕಿ 1,03,922 ಮೃತ ಫಲಾನುಭವಿಗಳ ಕುಟುಂಬದಲ್ಲಿ ಯಜಮಾನಿಯ ಹೆಸರು ಬದಲಾವಣೆ ಆಗಿ, ಮರು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ 1,08,755 ಮೃತ ಫಲಾನುಭವಿಗಳ ಮರಣದ ವಿವರ ಸಕಾಲಕ್ಕೆ ಲಭ್ಯವಾಗಿಲ್ಲ. ಹೀಗಾಗಿ ಇಲ್ಲಿ ಯಾವುದೇ ತಾಂತ್ರಿಕ ದೋಷವಾಗಿಲ್ಲ. ಆಧಾರ್ ಬೇಸ್ಡ್ ಪೇಮೆಂಟ್ ಸಿಸ್ಟಮ್‌ನಲ್ಲಿ ಬ್ಯಾಂಕ್ ಖಾತೆ ವಿವರ ಲಭ್ಯವಾಗುತ್ತದೆ. ಮೃತ ಫಲಾನುಭವಿಗಳ ಅಕೌಂಟ್‌ಗೆ 115 ಕೋಟಿ ರೂ. ಪಾವತಿಯಾಗಿದ್ದು, ಈ ಪೈಕಿ 15.24 ಕೋಟಿ ರೂ. ರಿಕವರಿ ಮಾಡಿದ್ದೇವೆ. ಉಳಿದ ಹಣವನ್ನು ರಿಕವರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದೆ.

ಫಲಾನುಭವಿಗಳು ಖಾತೆ ಹೊಂದಿರುವ ಬ್ಯಾಂಕ್‌ನ ತಾಂತ್ರಿಕ ದೋಷದಿಂದ ತಪ್ಪಾದ ಬ್ಯಾಂಕ್ ಖಾತೆ ವಿವರ ಕಡತದಲ್ಲಿ ಹಂಚಿಕೆಯಾಗಿರಬಹುದು. ಜಂಟಿ ಬ್ಯಾಂಕ್ ಖಾತೆಯಿದ್ದಲ್ಲಿ ಒಂದೇ ಬ್ಯಾಂಕ್ ಖಾತೆಗೆ ಒಂದಕ್ಕಿಂತ ಹೆಚ್ಚು ಫಲಾನುಭವಿಗಳ ಸರ್ಕಾರಿ ಸೌಲಭ್ಯ ಜಮೆಯಾಗಿರಬಹುದು. ಜಂಟಿ ಖಾತೆ ಇರುವಂತಹ ಫಲಾನುಭವಿಗಳ ಅತ್ತೆ-ಸೊಸೆ, ಅಮ್ಮ-ಮಗಳ ಬ್ಯಾಂಕ್ ಖಾತೆಗೆ ದುಡ್ಡು ಪಾವತಿಯಾಗಿದೆ. ಬೇರೆ ಬೇರೆ ಪಡಿತರ ಚೀಟಿ ಹೊಂದಿದ್ದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿರೋದ್ರಿಂದ ಎರಡೂ ಫಲಾನುಭವಿಗಳ ಮೊತ್ತ ಒಂದೇ ಖಾತೆಗೆ ಪಾವತಿ ಆಗಿರಬಹುದು ಎಂದು ತಿಳಿಸಿದೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

13 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

31 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

37 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

1 hour ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

1 hour ago