ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ ವರದಿ ಹೇಳಿದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆ ಯಾವುದೇ ಗೋಲ್ಮಾಲ್ ಆಗಿಲ್ಲ ಎಂದು ಡೇಟಾ ಸಮೇತ ಸ್ಪಷ್ಟೀಕರಣ ನೀಡಿದೆ.
ಗೃಹಲಕ್ಷ್ಮಿ ಯೋಜನೆಯ ಒಟ್ಟು 2,88,376 ಫಲಾನುಭವಿಗಳು ಸಾವನ್ನಪ್ಪಿದ್ದಾರೆ. ಆ ಪೈಕಿ 1,03,922 ಮೃತ ಫಲಾನುಭವಿಗಳ ಕುಟುಂಬದಲ್ಲಿ ಯಜಮಾನಿಯ ಹೆಸರು ಬದಲಾವಣೆ ಆಗಿ, ಮರು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ 1,08,755 ಮೃತ ಫಲಾನುಭವಿಗಳ ಮರಣದ ವಿವರ ಸಕಾಲಕ್ಕೆ ಲಭ್ಯವಾಗಿಲ್ಲ. ಹೀಗಾಗಿ ಇಲ್ಲಿ ಯಾವುದೇ ತಾಂತ್ರಿಕ ದೋಷವಾಗಿಲ್ಲ. ಆಧಾರ್ ಬೇಸ್ಡ್ ಪೇಮೆಂಟ್ ಸಿಸ್ಟಮ್ನಲ್ಲಿ ಬ್ಯಾಂಕ್ ಖಾತೆ ವಿವರ ಲಭ್ಯವಾಗುತ್ತದೆ. ಮೃತ ಫಲಾನುಭವಿಗಳ ಅಕೌಂಟ್ಗೆ 115 ಕೋಟಿ ರೂ. ಪಾವತಿಯಾಗಿದ್ದು, ಈ ಪೈಕಿ 15.24 ಕೋಟಿ ರೂ. ರಿಕವರಿ ಮಾಡಿದ್ದೇವೆ. ಉಳಿದ ಹಣವನ್ನು ರಿಕವರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದೆ.
ಫಲಾನುಭವಿಗಳು ಖಾತೆ ಹೊಂದಿರುವ ಬ್ಯಾಂಕ್ನ ತಾಂತ್ರಿಕ ದೋಷದಿಂದ ತಪ್ಪಾದ ಬ್ಯಾಂಕ್ ಖಾತೆ ವಿವರ ಕಡತದಲ್ಲಿ ಹಂಚಿಕೆಯಾಗಿರಬಹುದು. ಜಂಟಿ ಬ್ಯಾಂಕ್ ಖಾತೆಯಿದ್ದಲ್ಲಿ ಒಂದೇ ಬ್ಯಾಂಕ್ ಖಾತೆಗೆ ಒಂದಕ್ಕಿಂತ ಹೆಚ್ಚು ಫಲಾನುಭವಿಗಳ ಸರ್ಕಾರಿ ಸೌಲಭ್ಯ ಜಮೆಯಾಗಿರಬಹುದು. ಜಂಟಿ ಖಾತೆ ಇರುವಂತಹ ಫಲಾನುಭವಿಗಳ ಅತ್ತೆ-ಸೊಸೆ, ಅಮ್ಮ-ಮಗಳ ಬ್ಯಾಂಕ್ ಖಾತೆಗೆ ದುಡ್ಡು ಪಾವತಿಯಾಗಿದೆ. ಬೇರೆ ಬೇರೆ ಪಡಿತರ ಚೀಟಿ ಹೊಂದಿದ್ದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿರೋದ್ರಿಂದ ಎರಡೂ ಫಲಾನುಭವಿಗಳ ಮೊತ್ತ ಒಂದೇ ಖಾತೆಗೆ ಪಾವತಿ ಆಗಿರಬಹುದು ಎಂದು ತಿಳಿಸಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…