ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ಗಳು ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ ಎಂದು ಅವರು ಉಲ್ಲೇಖಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂದೇಶ
ಮತ್ತೊಂದು ಸಂದೇಶದಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಉಪಯುಕ್ತತೆ ಕುರಿತು ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…