ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಮಹಿಳೆಯರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ಗಳು ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ ಎಂದು ಅವರು ಉಲ್ಲೇಖಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂದೇಶ
ಮತ್ತೊಂದು ಸಂದೇಶದಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಉಪಯುಕ್ತತೆ ಕುರಿತು ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…