ಉಡುಪಿ: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.
ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಿಲ್ಲ. ನಕಲಿ ಆಯಪ್ಗ್ಳನ್ನು ಯಾರೂ ಕೂಡ ಮೊಬೈಲ್ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸ್ಆಯಪ್ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್ಗಳನ್ನು ಬಳಸಬಾರದು.
ಅಂತಹ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾರಾದರೂ ಕರೆ ಮಾಡಿ “ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ’ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್ಗೆ ಭೇಟಿ ನೀಡಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…