Featured

ಗೃಹಲಕ್ಷ್ಮೀ ದಿಂದ ಬೋರ್ ವೆಲ್ ಕೊರೆಸಿದ ಅತ್ತೆ- ಸೊಸೆ : ಇದು ಎಲ್ಲರಿಗೂ ಮಾದರಿ : ಸಚಿವೆ ಶ್ಲಾಘನೆ – vishwanews24

ಗೃಹಲಕ್ಷ್ಮೀ ದಿಂದ ಬೋರ್ ವೆಲ್ ಕೊರೆಸಿದ ಅತ್ತೆ- ಸೊಸೆ : ಇದು ಎಲ್ಲರಿಗೂ ಮಾದರಿ : ಸಚಿವೆ ಶ್ಲಾಘನೆ

ಬೆಳಗಾವಿ: ಗದಗದ ಅತ್ತೆ-ಸೊಸೆ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ ವ್ಯಕ್ತಪಡಿಸಿದ್ದು, ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ನಡುವೆ ಜಗಳ ಎನ್ನುತ್ತಿದ್ದ ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

 

ಗೃಹಲಕ್ಷ್ಮೀ ಯೋಜನೆಯ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಉತ್ತರ ನೀಡಿದ್ದು, ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಿದೆ.‌
ಗದಗ ಜಿಲ್ಲೆಯ ಗಜೇಂದ್ರಗಡದ ಅತ್ತೆ, ಸೊಸೆ ಕಾರ್ಯ ನೋಡಿ ತುಂಬಾ ಖುಷಿಯಾಯಿತು. ಗೃಹಲಕ್ಷ್ಮೀ ಯೋಜನೆಯ ಹಣ ಅತ್ತೆಗೊ, ಸೊಸೆಗೊ ಎಂದು ಹೇಳುವ ಮೂಲಕ ವಿರೋಧ ಪಕ್ಷದವರು ಜಗಳ ಸೃಷ್ಟಿಸುವ ಕೆಲಸ ಮಾಡುತ್ತಿದ್ದರು.‌ ಈಗ ಗದಗದ ಈ ಅತ್ತೆ, ಸೊಸೆ ಇಬ್ಬರೂ ಕೂಡಿಟ್ಟ ಹಣದಿಂದ ಬೊರವೆಲ್ ಕೊರೆಸಿ, ಮಾದರಿಯಾಗಿದ್ದಾರೆ ಎಂದರು.

ಗದಗದ ಅತ್ತೆ, ಸೊಸೆ ನಿಜವಾಗಿಯೂ ಆದರ್ಶವಾದಿಗಳಾಗಿದ್ದಾರೆ. ಬೋರ್ ವೆಲ್ ನಿಂದ ನೀರು ಹರಿಸಿ, ವ್ಯವಸಾಯ ಮಾಡುತ್ತಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡುವ ಸಲುವಾಗಿ ಎರಡು ಸಾವಿರ ಹಣ ಕೊಡಲಾಗುತ್ತಿದೆ. ಈ ರೀತಿಯ ಹಣವನ್ನು ಕೂಡಿಟ್ಟು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವೆ ಮೆಚ್ಚುಗೆ ವ್ಯಕ್ತಪಡಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

14 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago