Featured

ಗೃಹ ಜ್ಯೋತಿ ಯೋಜನೆ : ಸರ್ವರ್ ಸಮಸ್ಯೆ – ಅರ್ಜಿ ಸಲ್ಲಿಸಲು ಗ್ರಾಹಕರ ಪರದಾಟ – Vishwanews24

ಗೃಹ ಜ್ಯೋತಿ ಯೋಜನೆ : ಸರ್ವರ್ ಸಮಸ್ಯೆ: ಅರ್ಜಿ ಸಲ್ಲಿಸಲು ಗ್ರಾಹಕರ ಪರದಾಟ

ಬೆಂಗಳೂರು : ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ನಾಲ್ಕನೇ ದಿವೂ ಸರ್ವರ್ ಸಮಸ್ಯೆ ಎದುರಾಗಿದೆ.

ಹೌದು, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಬ್ಯೂಸಿ ಆದ ಕಾರಣ ಹಲವಡೆ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಹೋದವರು ಪರದಾಡುವಂತಾಗಿದೆ.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಗೃಹ ಬಳಕೆಯ ಗ್ರಾಹಕರಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತ ಯೋಜನೆಗೆ ಅರ್ಜಿ ಸಲ್ಲಿಕೆ ಶುರುವಾಗಿ ನಾಲ್ಕು ದಿನವಾಗಿದೆ, ಇಂದೂ ಸಹ ಕೆಲವಡೆ ಸರ್ವರ್ ಡೌನ್ ಆದ ಪರಿಣಾಮ ಅರ್ಜಿ ಸಲ್ಲಿಸಲು ಪರದಾಡುವಂತಾಗಿದೆ.

ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸರ್ವರ್ ಸಮಸ್ಯೆಯ ನಡುವೆಯೂ ರಾಜ್ಯಾದ್ಯಂತ ಕಳೆದ ಮೂರು ದಿನಗಳಲ್ಲಿ ಒಟ್ಟು 8,16,631 ಗ್ರಾಹಕರು ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಮಂಗಳವಾರ ಸಂಜೆ ವೇಳೆಗೆ ಒಟ್ಟು 8,16,631 ಮುಟ್ಟಿದ್ದು, ಕಳೆದ ಎರಡು ದಿನಗಳಿಗೆ ಹೋಲಿಸಿದರೆ, ನೋಂದಣಿ ಸಂಖ್ಯೆ ಮೂರು ಪಟ್ಟು ಹೆಚ್ಚಳಗೊಂಡಿದೆ. 200 ಯೂನಿಟ್‌ ವರೆಗಿನ ಉಚಿತ ವಿದ್ಯುತ್‌ ಪಡೆಯುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯ ಲಾಭ ಪಡೆಯಲು ಸಾರ್ವಜನಿಕರು ಭಾರೀ ಉತ್ಸುಕತೆ ತೋರುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago