ನವದೆಹಲಿ: ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.
ಇದರಿಂದ ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರಕ್ಕೆ ಅಡುಗೆ ಅನಿಲವನ್ನು ಖರೀದಿಸಬೇಕಾಗುತ್ತದೆ. ಕೋವಿಡ್ ಶುರುವಾದ ದಿನದಿಂದ ಎಲ್ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ.
ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 1006 ರೂ. ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂ. ಸಬ್ಸಿಡಿ ಸಿಗಲಿದೆ.
ಈ ಮೊದಲು ಸಬ್ಸಿಡಿ ಸಹಿತವಾಗಿಯೇ ಸಿಗುತಿತ್ತು. ಗೃಹ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್ ಖರೀದಿ ಮಾಡಿದ ಬಳಿಕ ಬ್ಯಾಂಕ್ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೋವಿಡ್ ಬಳಿಕ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…