ನವದೆಹಲಿ: ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.
ಇದರಿಂದ ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರಕ್ಕೆ ಅಡುಗೆ ಅನಿಲವನ್ನು ಖರೀದಿಸಬೇಕಾಗುತ್ತದೆ. ಕೋವಿಡ್ ಶುರುವಾದ ದಿನದಿಂದ ಎಲ್ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ.
ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 1006 ರೂ. ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂ. ಸಬ್ಸಿಡಿ ಸಿಗಲಿದೆ.
ಈ ಮೊದಲು ಸಬ್ಸಿಡಿ ಸಹಿತವಾಗಿಯೇ ಸಿಗುತಿತ್ತು. ಗೃಹ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್ ಖರೀದಿ ಮಾಡಿದ ಬಳಿಕ ಬ್ಯಾಂಕ್ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೋವಿಡ್ ಬಳಿಕ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…