ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಕೊನೆಗೂ ಮುಹೂರ್ತ ಪಿಕ್ಸ್ ಆಗಿದೆ. ಜುಲೈ.19ರಿಂದ ನೋಂದಣಿ ಆರಂಭಗೊಳ್ಳಲಿದೆ. ಹಾಗಾದ್ರೇ ಈ ಯೋಜನೆಗೆ ನೋಂದಣಿ ಹೇಗೆ? ಬೇಕಾಗುವ ದಾಖಲೆಗಳು ಏನು ..?
ಈ ಪ್ರಮುಖ ಹಾಗೂ ನಾಡಿನ ಮಹಿಳಾ ಸಮುದಾಯ ಕುತೂಹಲದಿದಂ ನಿರೀಕ್ಷಿಸುತ್ತಿದ್ದಂತ ಯೋಜನಗೆ ಜುಲೈ.19ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಲಿದ್ದಾರೆ.
ಸಿಎಂ ಚಾಲನೆಯ ಬಳಿಕ ಅಂದಾಜು 1.28 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2000 ರೂ ಹಣ ಜಮಾ ಮಾಡುವಂತ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಆಗಸ್ಟ್ 15ರ ನಂತ್ರ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ರೂ.2000 ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.
ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಹೇಗೆ.?
ಗೃಹ ಜ್ಯೋತಿಯಂತೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಗೃಹ ಲಕ್ಷ್ಮಿ ಯೋಜನೆಯಲ್ಲಿ ಸಾಧ್ಯವಿಲ್ಲ. ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಕೇಂದ್ರ ಅಧವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು. ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ನೋಂದಣಿ ಮಾಡಬಹುದಾಗಿದೆ.
ಇದಲ್ಲದೇ ಫಲಾನುಭವಿಗಳ ಹೆಸರು ನೋಂದಣಿಗೆ ಪ್ರಜಾ ಪ್ರತಿನಿಧಿ ಹೆಸರಿನಲ್ಲಿ ಸ್ವಯಂ ಸೇವಕರನ್ನು ನೇಮಕ ಮಾಡಲಾಗುತ್ತಿದೆ. ಅವರು ಗೃಹ ಲಕ್ಷ್ಮಿಯರಿಗೆ ನೋಂದಣಿ ಮಾಡಿಕೊಳ್ಳಲು ನೆರವಾಗಲಿದ್ದಾರೆ.
ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಸಿದಾಗ ಅಲ್ಲಿಯೇ ಮಂಜೂರಾತಿ ಪತ್ರ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿದರೇ ಮಂಜೂರಾತಿ ಪತ್ರವನ್ನು ನಂತ್ರ ಮನೆಗೆ ತಲುಪಲಿದೆ.
ಅಂದಹಾಗೇ ಗೃಹ ಲಕ್ಷ್ಮೀ ಯೋಜನೆಗಾಗಿ ಯಜಮಾನಿ ಮಹಿಳೆಯರು ನೋಂದಣಿ ಮಾಡಲು ಸಂಪೂರ್ಣ ಉಚಿತವಾಗಿದೆ. ಯಾವುದೇ ಶುಲ್ಕವಿಲ್ಲ. ಅಲ್ಲವೇ ನೋಂದಣಿಗೆ ಯಾವುದೇ ಗಡುವು ಕೂಡ ಇಲ್ಲ.
ಪಡಿತರ ಚೀಟಿಗಳ ಲಭ್ಯ ಡೇಟಾ ಆಧರಿಸಿ ನೋಂದಣಿಗೆ ದಿನಾಂಕ ಹಾಗೂ ಸಮಯ ನಿಗದಿಪಡಿಸಲಾಗುತ್ತದೆ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಆ ಕುರಿತು ಮಾಹಿತಿ ಕೂಡ ಎಸ್ ಎಂಎಸ್ ಮೂಲಕ ಬರಲಿದೆ.
ಗೃಹ ಲಕ್ಷ್ಮಿ ಯೋಜನೆಗೆ ಅಗತ್ಯ ದಾಖಲೆಗಳು ಏನು.?
ಗೃಹ ಲಕ್ಷ್ಮಿ ಯೋಜನೆಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ನೀಡಬೇಕಿದೆ.
ಆಧಾರ್ ನಂಬರ್ ಜೋಡನೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ, ಬೇರೊಂದು ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲಿ, ಆ ಬ್ಯಾಂಕ್ ಖಾತೆಯ ಪಾಸ್ ಬುಕ್ ನೀಡಬೇಕು.
ಫಲಾನುಭವಿ ಹೆಸರಿನಲ್ಲಿಯೇ ಬ್ಯಾಂಕ್ ಖಾತೆ ಇರಬೇಕಾಗಿದೆ. ಬ್ಯಾಂಕ್ ಖಾತೆ ಇಲ್ಲದಿದ್ದಲೇ ಖಾತೆ ತೆರೆದ ಬಳಿಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…