Featured

ಗೃಹ ಲಕ್ಷ್ಮಿ ಯೋಜನೆ – ನೋಂದಣಿ ಹೇಗೆ ; ಇಲ್ಲಿದೆ ಮಾಹಿತಿ – Vishwanews24

ಗೃಹ ಲಕ್ಷ್ಮಿ ಯೋಜನೆ – ನೋಂದಣಿ ಹೇಗೆ ; ಇಲ್ಲಿದೆ ಮಾಹಿತಿ

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ  ಕೊನೆಗೂ ಮುಹೂರ್ತ ಪಿಕ್ಸ್ ಆಗಿದೆ. ಜುಲೈ.19ರಿಂದ ನೋಂದಣಿ ಆರಂಭಗೊಳ್ಳಲಿದೆ. ಹಾಗಾದ್ರೇ ಈ ಯೋಜನೆಗೆ ನೋಂದಣಿ ಹೇಗೆ? ಬೇಕಾಗುವ ದಾಖಲೆಗಳು ಏನು ..?

ಈ ಪ್ರಮುಖ ಹಾಗೂ ನಾಡಿನ ಮಹಿಳಾ ಸಮುದಾಯ ಕುತೂಹಲದಿದಂ ನಿರೀಕ್ಷಿಸುತ್ತಿದ್ದಂತ ಯೋಜನಗೆ ಜುಲೈ.19ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಚಾಲನೆ ನೀಡಲಿದ್ದಾರೆ.

ಸಿಎಂ ಚಾಲನೆಯ ಬಳಿಕ ಅಂದಾಜು 1.28 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2000 ರೂ ಹಣ ಜಮಾ ಮಾಡುವಂತ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಆಗಸ್ಟ್ 15ರ ನಂತ್ರ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ರೂ.2000 ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.

ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಹೇಗೆ.?

ಗೃಹ ಜ್ಯೋತಿಯಂತೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಗೃಹ ಲಕ್ಷ್ಮಿ ಯೋಜನೆಯಲ್ಲಿ ಸಾಧ್ಯವಿಲ್ಲ. ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಕೇಂದ್ರ ಅಧವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು. ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ನೋಂದಣಿ ಮಾಡಬಹುದಾಗಿದೆ.

ಇದಲ್ಲದೇ ಫಲಾನುಭವಿಗಳ ಹೆಸರು ನೋಂದಣಿಗೆ ಪ್ರಜಾ ಪ್ರತಿನಿಧಿ ಹೆಸರಿನಲ್ಲಿ ಸ್ವಯಂ ಸೇವಕರನ್ನು ನೇಮಕ ಮಾಡಲಾಗುತ್ತಿದೆ. ಅವರು ಗೃಹ ಲಕ್ಷ್ಮಿಯರಿಗೆ ನೋಂದಣಿ ಮಾಡಿಕೊಳ್ಳಲು ನೆರವಾಗಲಿದ್ದಾರೆ.

ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಸಿದಾಗ ಅಲ್ಲಿಯೇ ಮಂಜೂರಾತಿ ಪತ್ರ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿದರೇ ಮಂಜೂರಾತಿ ಪತ್ರವನ್ನು ನಂತ್ರ ಮನೆಗೆ ತಲುಪಲಿದೆ.

ಅಂದಹಾಗೇ ಗೃಹ ಲಕ್ಷ್ಮೀ ಯೋಜನೆಗಾಗಿ ಯಜಮಾನಿ ಮಹಿಳೆಯರು ನೋಂದಣಿ ಮಾಡಲು ಸಂಪೂರ್ಣ ಉಚಿತವಾಗಿದೆ. ಯಾವುದೇ ಶುಲ್ಕವಿಲ್ಲ. ಅಲ್ಲವೇ ನೋಂದಣಿಗೆ ಯಾವುದೇ ಗಡುವು ಕೂಡ ಇಲ್ಲ.

ಪಡಿತರ ಚೀಟಿಗಳ ಲಭ್ಯ ಡೇಟಾ ಆಧರಿಸಿ ನೋಂದಣಿಗೆ ದಿನಾಂಕ ಹಾಗೂ ಸಮಯ ನಿಗದಿಪಡಿಸಲಾಗುತ್ತದೆ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಆ ಕುರಿತು ಮಾಹಿತಿ ಕೂಡ ಎಸ್ ಎಂಎಸ್ ಮೂಲಕ ಬರಲಿದೆ.

ಗೃಹ ಲಕ್ಷ್ಮಿ ಯೋಜನೆಗೆ ಅಗತ್ಯ ದಾಖಲೆಗಳು ಏನು.?

ಗೃಹ ಲಕ್ಷ್ಮಿ ಯೋಜನೆಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ನೀಡಬೇಕಿದೆ.

ಆಧಾರ್ ನಂಬರ್ ಜೋಡನೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ, ಬೇರೊಂದು ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲಿ, ಆ ಬ್ಯಾಂಕ್ ಖಾತೆಯ ಪಾಸ್ ಬುಕ್ ನೀಡಬೇಕು.

ಫಲಾನುಭವಿ ಹೆಸರಿನಲ್ಲಿಯೇ ಬ್ಯಾಂಕ್ ಖಾತೆ ಇರಬೇಕಾಗಿದೆ. ಬ್ಯಾಂಕ್ ಖಾತೆ ಇಲ್ಲದಿದ್ದಲೇ ಖಾತೆ ತೆರೆದ ಬಳಿಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

10 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

27 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

36 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

52 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

1 hour ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

1 hour ago