Featured

ಗೃಹ ಲಕ್ಷ್ಮಿ ಯೋಜನೆ – ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್  ಸ್ಪಷ್ಟನೆ – Vishwanews24

ಗೃಹ ಲಕ್ಷ್ಮಿ ಯೋಜನೆ – ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್  ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯ 2,000ರೂಪಾಯಿಗಳ ಆರ್ಥಿಕ ನೆರವು ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. ಇದುವರೆಗೂ 9‌.44ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಜಮೆ‌ಯಾಗಿಲ್ಲ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. 1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ.

5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ‌ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9‌.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆ‌ಯಾಗಿಲ್ಲ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.

ಹಣ ಜಮೆಯಾಗಿಲ್ಲ ಏಕೆ?

3,082 ಅರ್ಜಿದಾರರು ಮರಣ ಹೊಂದಿದ್ದು ಅವರನ್ನು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೆಯುತ್ತಿದೆ.

ಇನ್ನು ಸೆಪ್ಟೆಂಬರ್​ನಲ್ಲಿ 1 ಕೋಟಿ 14ಲಕ್ಷ ಜನ ಗೃಹಲಕ್ಷ್ಮಿ ‌ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್​​ನಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ 2,280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago