Featured

ಗೃಹ ಲಕ್ಷ್ಮಿ ಯೋಜನೆ – ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್  ಸ್ಪಷ್ಟನೆ – Vishwanews24

ಗೃಹ ಲಕ್ಷ್ಮಿ ಯೋಜನೆ – ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್  ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯ 2,000ರೂಪಾಯಿಗಳ ಆರ್ಥಿಕ ನೆರವು ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. ಇದುವರೆಗೂ 9‌.44ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಜಮೆ‌ಯಾಗಿಲ್ಲ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. 1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ.

5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ‌ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9‌.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆ‌ಯಾಗಿಲ್ಲ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.

ಹಣ ಜಮೆಯಾಗಿಲ್ಲ ಏಕೆ?

3,082 ಅರ್ಜಿದಾರರು ಮರಣ ಹೊಂದಿದ್ದು ಅವರನ್ನು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೆಯುತ್ತಿದೆ.

ಇನ್ನು ಸೆಪ್ಟೆಂಬರ್​ನಲ್ಲಿ 1 ಕೋಟಿ 14ಲಕ್ಷ ಜನ ಗೃಹಲಕ್ಷ್ಮಿ ‌ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್​​ನಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ 2,280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

10 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

29 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

3 hours ago