ಬೆಂಗಳೂರು: ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯ 2,000ರೂಪಾಯಿಗಳ ಆರ್ಥಿಕ ನೆರವು ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. ಇದುವರೆಗೂ 9.44ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ.
ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. 1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ.
5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.
ಹಣ ಜಮೆಯಾಗಿಲ್ಲ ಏಕೆ?
3,082 ಅರ್ಜಿದಾರರು ಮರಣ ಹೊಂದಿದ್ದು ಅವರನ್ನು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೆಯುತ್ತಿದೆ.
ಇನ್ನು ಸೆಪ್ಟೆಂಬರ್ನಲ್ಲಿ 1 ಕೋಟಿ 14ಲಕ್ಷ ಜನ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್ನಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ 2,280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…