Featured

‘ಗೃಹ ಲಕ್ಷ್ಮೀʼ ಹಣ ಎಲ್ಲಿಯೂ ಹೋಗಿಲ್ಲ, ಯಾರು ದುರ್ಬಳಕೆ ಮಾಡಿಕೊಂಡಿಲ್ಲ ; ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ : ಸತೀಶ್ ಜಾರಕಿಹೊಳಿ – vishwanews24

‘ಗೃಹ ಲಕ್ಷ್ಮೀʼ ಹಣ ಎಲ್ಲಿಯೂ ಹೋಗಿಲ್ಲ, ಯಾರು ದುರ್ಬಳಕೆ ಮಾಡಿಕೊಂಡಿಲ್ಲ ; ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ : ಸತೀಶ್ ಜಾರಕಿಹೊಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮೀ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಎಲ್ಲಿಯೂ ಹೋಗಿಲ್ಲ. ಇದರನ್ನು ಯಾರು ದುರ್ಬಳಕೆ ಮಾಡಿಕೊಂಡಿಲ್ಲ. ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಾದರೂ ನಾಪತ್ತೆಯಾದರೆ ಆದಾಯ ತೆರಿಗೆ ಇಲಾಖೆಯವರು ಸುಮ್ಮನೆ ಬಿಡುತ್ತಾರೆಯೇ?. ಆದರೂ, ಈ ಗೊಂದಲದ ಬಗ್ಗೆ ಹಣಕಾಸು ಇಲಾಖೆ ಹಾಗೂ ಸಂಬಂಧಪಟ್ಟ ಮಂತ್ರಿಗಳು ಶೀಘ್ರವೇ ಸ್ಪಷ್ಟೀಕರಣ ನೀಡಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಂತರಿಕ ಗೊಂದಲಗಳ್ನು ನೀವು ನೀವೇ ಬಗೆಹರಿಸಿಕೊಳ್ಳಿ ಎಂದು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಆದರೆ ಆ ಮಾತು ನಮಗಲ್ಲ, ಅದು ಕ್ಯಾಪ್ಟನ್ ಮತ್ತು ವೈಸ್ ಕ್ಯಾಪ್ಟನ್ ಹೈಕಮಾಂಡ್ ಅವರಿಗೆ ಹೇಳಿದ್ದಾರೆಂದು ಎಂದು ಮಾರ್ಮಿಕವಾಗಿ ನುಡಿದರು.

ಜ.25 ರಂದು ನಡೆಯಲಿರುವ ಅಹಿಂದ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಅಹಿಂದ ಎನ್ನುವುದು ನಮ್ಮ ಶಕ್ತಿ. ಇದನ್ನು ಮಾಡಲು ನಮಗೆ ಯಾರ ಪ್ರಮಾಣ ಪತ್ರ ಬೇಕಿಲ್ಲ. ಸಮಾವೇಶ ಯಾರೇ ಮಾಡಿದರೂ ನಮ್ಮ ಅಭ್ಯಂತರವಿಲ್ಲ ಎಂದರು.

 

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago