Featured

‘ಗೃಹ ಲಕ್ಷ್ಮೀʼ ಹಣ ಎಲ್ಲಿಯೂ ಹೋಗಿಲ್ಲ, ಯಾರು ದುರ್ಬಳಕೆ ಮಾಡಿಕೊಂಡಿಲ್ಲ ; ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ : ಸತೀಶ್ ಜಾರಕಿಹೊಳಿ – vishwanews24

‘ಗೃಹ ಲಕ್ಷ್ಮೀʼ ಹಣ ಎಲ್ಲಿಯೂ ಹೋಗಿಲ್ಲ, ಯಾರು ದುರ್ಬಳಕೆ ಮಾಡಿಕೊಂಡಿಲ್ಲ ; ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ : ಸತೀಶ್ ಜಾರಕಿಹೊಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗೃಹಲಕ್ಷ್ಮೀ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಎಲ್ಲಿಯೂ ಹೋಗಿಲ್ಲ. ಇದರನ್ನು ಯಾರು ದುರ್ಬಳಕೆ ಮಾಡಿಕೊಂಡಿಲ್ಲ. ಎಲ್ಲವೂ ಫಲಾನುಭವಿಗಳಿಗೆ ತಲುಪಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಾದರೂ ನಾಪತ್ತೆಯಾದರೆ ಆದಾಯ ತೆರಿಗೆ ಇಲಾಖೆಯವರು ಸುಮ್ಮನೆ ಬಿಡುತ್ತಾರೆಯೇ?. ಆದರೂ, ಈ ಗೊಂದಲದ ಬಗ್ಗೆ ಹಣಕಾಸು ಇಲಾಖೆ ಹಾಗೂ ಸಂಬಂಧಪಟ್ಟ ಮಂತ್ರಿಗಳು ಶೀಘ್ರವೇ ಸ್ಪಷ್ಟೀಕರಣ ನೀಡಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಂತರಿಕ ಗೊಂದಲಗಳ್ನು ನೀವು ನೀವೇ ಬಗೆಹರಿಸಿಕೊಳ್ಳಿ ಎಂದು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಆದರೆ ಆ ಮಾತು ನಮಗಲ್ಲ, ಅದು ಕ್ಯಾಪ್ಟನ್ ಮತ್ತು ವೈಸ್ ಕ್ಯಾಪ್ಟನ್ ಹೈಕಮಾಂಡ್ ಅವರಿಗೆ ಹೇಳಿದ್ದಾರೆಂದು ಎಂದು ಮಾರ್ಮಿಕವಾಗಿ ನುಡಿದರು.

ಜ.25 ರಂದು ನಡೆಯಲಿರುವ ಅಹಿಂದ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಅಹಿಂದ ಎನ್ನುವುದು ನಮ್ಮ ಶಕ್ತಿ. ಇದನ್ನು ಮಾಡಲು ನಮಗೆ ಯಾರ ಪ್ರಮಾಣ ಪತ್ರ ಬೇಕಿಲ್ಲ. ಸಮಾವೇಶ ಯಾರೇ ಮಾಡಿದರೂ ನಮ್ಮ ಅಭ್ಯಂತರವಿಲ್ಲ ಎಂದರು.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago