Featured

ಗೃಹ ಸಚಿವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ : ಬಿಜೆಪಿ ಮುಖಂಡನ ಬಂಧನ -Vishwanews24

ಗೃಹ ಸಚಿವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ : ಬಿಜೆಪಿ ಮುಖಂಡನ ಬಂಧನ -Vishwanews24

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದ ಬಿಜೆಪಿ ಮುಖಂಡನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಭವಾನಿ ರಾವ್‌ ಮೋರೆ(37) ಬಂಧಿತ ಆರೋಪಿಯಾಗಿದ್ದು, ಈತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ವಿಸ್ತಾರಕ ಕೂಡ ಆಗಿದ್ದ. ಆರೋಪಿಯು ವಿಜಯನಗರ ನಿವಾಸಿ ಹಾಗೂ ಕರ್ನಾಟಕ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಓನರ್ಸ್‌ ವಿಮೆನ್‌ ಎಂಪ್ಲಾಯೀಸ್‌ ಸರ್ವಿಸ್‌ ಅಸೋಸಿಯೇಷನ್‌ ಜಂಟಿ ಕಾರ್ಯದರ್ಶಿ ಸುರೇಶ್‌ ಎಂಬವರಿಗೆ 25 ಲಕ್ಷ ರೂ. ವಂಚಿಸಿದ್ದ. ಈ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಇತ್ತೀಚೆಗೆ ನಗರದಲ್ಲಿರುವ ಲೇಡಿಸ್‌ ಸರ್ವಿಸ್‌ ಬಾರ್‌ಗಳನ್ನು ಮುಚ್ಚುವಂತೆ ನಗರ ಪೊಲೀಸ್‌ ಆಯುಕ್ತರು ಆದೇಶಿಸಿದ್ದು, ಎರಡು ದಿನಗಳ ಕಾಲ ಬಾರ್‌ಗಳನ್ನು ಮುಚ್ಚಲಾಗಿತ್ತು. ಈ ಮಧ್ಯೆ ಆರೋಪಿ, ಸುರೇಶ್‌ ಬಗ್ಗೆ ತಿಳಿದುಕೊಂಡು, ಅ. 23 ರಂದು ರೆಸಿಡೆನ್ಸಿ ರಸ್ತೆಯಲ್ಲಿರುವ ಸುರೇಶ್‌ ಅವರ ಬಾರ್‌ಗೆ ತೆರಳಿದ್ದಾನೆ. ಆಗ ಆರೋಪಿ, ತಾನು ಶಿವಮೊಗ್ಗ ಮೂಲದ ಬಿಜೆಪಿ ಮುಖಂಡನಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ಎಲ್ಲ ಸಚಿವರು, ಬಿಜೆಪಿ ಮುಖಂಡರು ಪರಿಚಯವಿದ್ದಾರೆ ಎಂದು, ಅವರೊಂದಿಗೆ ತೆಗೆಸಿಕೊಂಡಿರುವ ಫೋಟೊಗಳನ್ನು ತೋರಿಸಿ ನಂಬಿಸಿದ್ದಾನೆ. ಅಲ್ಲದೆ, ‘ಪೊಲೀಸರಿಂದ ಆಗಾಗ್ಗೆ ತೊಂದರೆಯಾಗುತ್ತಿದೆ. ನೀವು ಮನಸ್ಸು ಮಾಡಿದರೆ ನಾನು ನಿಮಗೆ ಯಾರಿಂದಲೂ ತೊಂದರೆಯಾಗದ ರೀತಿಯಲ್ಲಿ ಬಾರ್‌ಗಳನ್ನು ನಡೆಸಿಕೊಂಡು ಹೋಗುವಂತೆ ಅವಕಾಶ ಕಲ್ಪಿಸುತ್ತೇನೆ. ಅದಕ್ಕಾಗಿ 1.25 ಕೋಟಿ ರೂ. ಕೊಟ್ಟರೆ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತೇನೆ’ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದ.

ಅಲ್ಲದೇ, ಅಸೋಸಿಯೇಷನ್‌ ಜತೆ ಚರ್ಚಿಸಿ ತಿಳಿಸಿ ಎಂದು ಸಲಹೆ ಕೂಡ ನೀಡಿದ್ದ ಎಂದು ಸುರೇಶ್‌ ದೂರಿನಲ್ಲಿ ತಿಳಿಸಿದ್ದಾರೆ. ಆನಂತರ ಸುರೇಶ್‌ ಅಸೋಸಿಯೇಷನ್‌ನ 44 ಮಂದಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಒಟ್ಟು 1.25 ಕೋಟಿ ರೂ.ಗಳನ್ನು ಯುಬಿ ಸಿಟಿಯಲ್ಲಿರುವ ಓಕ್‌ವುಡ್‌ ಹೋಟೆಲ್‌ನಲ್ಲಿ ಆರೋಪಿಗೆ ನೀಡಿದ್ದರು. ಬಳಿಕ ಈ ವ್ಯಕ್ತಿ ಮಾತು ಬದಲಿಸಿದ್ದ. ಆಗ ಸಂಶಯಗೊಂದು ವಿಚಾರಿಸಿದಾಗ 1 ಕೋಟಿ ರೂ. ವಾಪಸ್‌ ನೀಡಿದ್ದಾನೆ. ಉಳಿದ 25 ಲಕ್ಷ ಕೊಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಈ ಹಿಂದೆಯೂ ಸಾಕಷ್ಟು ಮಂದಿಗೆ ಬಿಜೆಪಿ ಮುಖಂಡರು, ಸಚಿವರ ಹೆಸರಿನಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

18 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

20 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

21 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

21 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

21 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

21 hours ago