Featured

ಗೃಹ ಸಚಿವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ : ಬಿಜೆಪಿ ಮುಖಂಡನ ಬಂಧನ -Vishwanews24

ಗೃಹ ಸಚಿವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ : ಬಿಜೆಪಿ ಮುಖಂಡನ ಬಂಧನ -Vishwanews24

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದ ಬಿಜೆಪಿ ಮುಖಂಡನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಭವಾನಿ ರಾವ್‌ ಮೋರೆ(37) ಬಂಧಿತ ಆರೋಪಿಯಾಗಿದ್ದು, ಈತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ವಿಸ್ತಾರಕ ಕೂಡ ಆಗಿದ್ದ. ಆರೋಪಿಯು ವಿಜಯನಗರ ನಿವಾಸಿ ಹಾಗೂ ಕರ್ನಾಟಕ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಓನರ್ಸ್‌ ವಿಮೆನ್‌ ಎಂಪ್ಲಾಯೀಸ್‌ ಸರ್ವಿಸ್‌ ಅಸೋಸಿಯೇಷನ್‌ ಜಂಟಿ ಕಾರ್ಯದರ್ಶಿ ಸುರೇಶ್‌ ಎಂಬವರಿಗೆ 25 ಲಕ್ಷ ರೂ. ವಂಚಿಸಿದ್ದ. ಈ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಇತ್ತೀಚೆಗೆ ನಗರದಲ್ಲಿರುವ ಲೇಡಿಸ್‌ ಸರ್ವಿಸ್‌ ಬಾರ್‌ಗಳನ್ನು ಮುಚ್ಚುವಂತೆ ನಗರ ಪೊಲೀಸ್‌ ಆಯುಕ್ತರು ಆದೇಶಿಸಿದ್ದು, ಎರಡು ದಿನಗಳ ಕಾಲ ಬಾರ್‌ಗಳನ್ನು ಮುಚ್ಚಲಾಗಿತ್ತು. ಈ ಮಧ್ಯೆ ಆರೋಪಿ, ಸುರೇಶ್‌ ಬಗ್ಗೆ ತಿಳಿದುಕೊಂಡು, ಅ. 23 ರಂದು ರೆಸಿಡೆನ್ಸಿ ರಸ್ತೆಯಲ್ಲಿರುವ ಸುರೇಶ್‌ ಅವರ ಬಾರ್‌ಗೆ ತೆರಳಿದ್ದಾನೆ. ಆಗ ಆರೋಪಿ, ತಾನು ಶಿವಮೊಗ್ಗ ಮೂಲದ ಬಿಜೆಪಿ ಮುಖಂಡನಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ಎಲ್ಲ ಸಚಿವರು, ಬಿಜೆಪಿ ಮುಖಂಡರು ಪರಿಚಯವಿದ್ದಾರೆ ಎಂದು, ಅವರೊಂದಿಗೆ ತೆಗೆಸಿಕೊಂಡಿರುವ ಫೋಟೊಗಳನ್ನು ತೋರಿಸಿ ನಂಬಿಸಿದ್ದಾನೆ. ಅಲ್ಲದೆ, ‘ಪೊಲೀಸರಿಂದ ಆಗಾಗ್ಗೆ ತೊಂದರೆಯಾಗುತ್ತಿದೆ. ನೀವು ಮನಸ್ಸು ಮಾಡಿದರೆ ನಾನು ನಿಮಗೆ ಯಾರಿಂದಲೂ ತೊಂದರೆಯಾಗದ ರೀತಿಯಲ್ಲಿ ಬಾರ್‌ಗಳನ್ನು ನಡೆಸಿಕೊಂಡು ಹೋಗುವಂತೆ ಅವಕಾಶ ಕಲ್ಪಿಸುತ್ತೇನೆ. ಅದಕ್ಕಾಗಿ 1.25 ಕೋಟಿ ರೂ. ಕೊಟ್ಟರೆ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತೇನೆ’ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದ.

ಅಲ್ಲದೇ, ಅಸೋಸಿಯೇಷನ್‌ ಜತೆ ಚರ್ಚಿಸಿ ತಿಳಿಸಿ ಎಂದು ಸಲಹೆ ಕೂಡ ನೀಡಿದ್ದ ಎಂದು ಸುರೇಶ್‌ ದೂರಿನಲ್ಲಿ ತಿಳಿಸಿದ್ದಾರೆ. ಆನಂತರ ಸುರೇಶ್‌ ಅಸೋಸಿಯೇಷನ್‌ನ 44 ಮಂದಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಒಟ್ಟು 1.25 ಕೋಟಿ ರೂ.ಗಳನ್ನು ಯುಬಿ ಸಿಟಿಯಲ್ಲಿರುವ ಓಕ್‌ವುಡ್‌ ಹೋಟೆಲ್‌ನಲ್ಲಿ ಆರೋಪಿಗೆ ನೀಡಿದ್ದರು. ಬಳಿಕ ಈ ವ್ಯಕ್ತಿ ಮಾತು ಬದಲಿಸಿದ್ದ. ಆಗ ಸಂಶಯಗೊಂದು ವಿಚಾರಿಸಿದಾಗ 1 ಕೋಟಿ ರೂ. ವಾಪಸ್‌ ನೀಡಿದ್ದಾನೆ. ಉಳಿದ 25 ಲಕ್ಷ ಕೊಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಈ ಹಿಂದೆಯೂ ಸಾಕಷ್ಟು ಮಂದಿಗೆ ಬಿಜೆಪಿ ಮುಖಂಡರು, ಸಚಿವರ ಹೆಸರಿನಲ್ಲಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

8 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

9 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

9 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

12 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

12 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

12 hours ago