ಗೃಹ ಸಚಿವ ಅಮಿತ್ ಶಾ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು : ಐವನ್ ಡಿಸೋಜಾ -Vishwanews24

ಮಂಗಳೂರು:ಗೃಹ ಸಚಿವ ಅಮಿತ್ ಶಾ ಎನ್‌ಆರ್‌ಸಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ನೀಡಿರುವುದರ ಕುರಿತು ಸ್ಪಷ್ಟೀಕರಣ ನೀಡಬೇಕು ಇಲ್ಲವೇ ಕ್ಷಮೆಯಾಚಿಸಬೇಕುಎಂದು ಐವನ್ ಡಿಸೋಜಾ ಹೇಳಿದ್ದಾರೆ.

ಮಂಗಳೂರಿಗೆ ಅಮಿತ್ ಶಾ ಬರುವುದರ ವಿರುದ್ಧ ಗೋ ಬ್ಯಾಕ್ ಎಂಬ ಕಾರಣಕ್ಕೋ ಅಥವಾ ಅವರಿಗೆ ಸಮಯ ಹೊಂದಿಕೆ ಆಗಿಲ್ಲ ಎಂಬ ಕಾರಣಕ್ಕೋ ಅವರ ಮಂಗಳೂರು ಪ್ರವಾಸ ಸದ್ಯ ರದ್ದಾಗಿದೆ. ಇದೀಗ ರಾಜ್ಯಕ್ಕೆ  18ರಂದು ಭೇಟಿ ನೀಡಲಿರುವ ಅವರು ತಮ್ಮ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲಾ ರಾಜ್ಯಗಳಲ್ಲಿ ಎನ್‌ಆರ್‌ಸಿ ಅನುಷ್ಠಾನಗೊಳಿಸಲು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದರೆ, ಅಮಿತ್ ಶಾ ಅನುಷ್ಠಾನಗೊಳಿಸುವುದರಲ್ಲಿ ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಈ ಮೂಲಕ ದೇಶದಲ್ಲಿ ನಡೆಯುತ್ತಿರುವ ಪ್ರಸಕ್ತ ಪರಿಸ್ಥಿತಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಅವರು ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ಅಥವಾ ಪ್ರಧಾನಮಂತ್ರಿ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದರು.

ಕಪಾಳಬೆಟ್ಟದಲ್ಲಿ ಯೇಸು ಕ್ರಿಸ್ತರ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸಿ ಕನಕಪುರದಲ್ಲಿ ಮಾನತಾಡಿರುವ ಕಲ್ಲಡ್ಕ ಪ್ರಭಾಕರ ಭಟ್, ಸಮುದಾಯಕ್ಕೆ ನೋವಾಗುವಂತೆ ನಡೆದುಕೊಂಡಿದ್ದಾರೆ ಎಂದರು.

 

ಕಪಾಳಬೆಟ್ಟದಲ್ಲಿ ಯೇಸು ಕ್ರಿಸ್ತರ ಪ್ರತಿಮೆ ಸ್ಥಾಪನೆ ಅಕ್ರಮ ಎಂದಾದರೆ ಆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪರ ಮನೆಯ ಎದುರಲ್ಲೋ ಅಥವಾ ವಿಧಾನಸಭೆಯ ಎದುರೋ ಪ್ರತಿಭಟಿಸಬಹುದಿತ್ತು. ಆದರೆ ಈ ರೀತಿ ರಾಜಕೀಯ ಮಾಡಿ ಗೊಂದಲ ಸೃಷ್ಟಿಸಿ ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕಾರ್ಯ ಸಂವಿಧಾನ ವಿರೋಧಿ ಎಂದು ಅವರು ಹೇಳಿದರು.

 

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

6 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

6 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

7 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

7 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

7 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

7 hours ago