ಗೆಜ್ಜೆಗಿರಿ ನಂದನಬಿತ್ತಿಲ್‌ ಕ್ಷೇತ್ರ : ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಸಜ್ಜು , 500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ.. Vishwanews24

ಗೆಜ್ಜೆಗಿರಿ ನಂದನಬಿತ್ತಿಲ್‌ ಕ್ಷೇತ್ರ : ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಸಜ್ಜು ..

500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ..

ಪುತ್ತೂರು : ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತಿಲ್‌ ಕ್ಷೇತ್ರದಲ್ಲಿ ಫೆ.24ರಿಂದ ಮಾ.2ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮ ನಡೆಯಲಿದೆ.

500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ಚಾರಿತ್ರಿಕಗೊಳಿಸಲು 22 ಉಪ ಸಮಿತಿಗಳ ಮೂಲಕ ಸಿದ್ಧತೆ ಮಾಡಲಾಗುತ್ತಿದೆ. ಜಗತ್ತಿನೆಲ್ಲೆಡೆ ಇರುವ ಕ್ಷೇತ್ರದ ಭಕ್ತರನ್ನು ಸಂಪರ್ಕಿಸುವ ಕಾರ್ಯ ನಡೆದಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಕ್ಷೇತ್ರಾಡಳಿತ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ತಿಳಿಸಿದೆ.

ಗೆಜ್ಜೆಗಿರಿಯಲ್ಲಿ ಎಲ್ಲ ಸಾನ್ನಿಧ್ಯಗಳ ನಿರ್ಮಾಣ ಪೂರ್ಣಗೊಂಡಿದೆ. ಗುರು ಸಾಯನ ಬೈದ್ಯರು, ಮಾತೆ ದೇಯಿ ಬೈದ್ಯೆತಿ ಮತ್ತು ಕೋಟಿ- ಚೆನ್ನಯರು ಬಾಳಿ ಬದುಕಿದ್ದ ಪ್ರಾಚೀನ ಮನೆಯನ್ನೇ ಸತ್ಯಧರ್ಮ ಚಾವಡಿ ಹೆಸರಿನಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಿಸಲಾಗಿದೆ. ಶಿಖರಾಗ್ರದಲ್ಲಿ ಕೋಟಿ – ಚೆನ್ನಯ ಮೂಲಸ್ಥಾನ ಗರಡಿ ಮತ್ತು ಬೆರ್ಮೆರ್‌ ಗುಂಡ ತಲೆ ಎತ್ತಿದ್ದು, ತಪ್ಪಲಲ್ಲಿ ಸತ್ಯಧರ್ಮ ಚಾವಡಿ, ಧೂಮಾವತಿ ದೈವಸ್ಥಾನ, ಕುಪ್ಪೆ ಪಂಜುರ್ಲಿ ದೈವಸ್ಥಾನ, ಕಲ್ಲಾಲ್ದಾಯ ಮತ್ತು ಕೊರತಿ ಸಾನ್ನಿಧ್ಯ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆ ಹಾಗೂ ಮಾತೆ ದೇಯಿ ಬೈದ್ಯೆತಿ ಸಮಾಧಿ ಪುನರುತ್ಥಾನ ಪೂರ್ಣಗೊಂಡಿದೆ.

ಫೆ. 24ರಂದು ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಾನಗಳು ಆರಂಭಗೊಳ್ಳಲಿದ್ದು, 28ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ. ಫೆ. 29ರಿಂದ ಮಾ. 2ರ ವರೆಗೆ ಮೂಲಸ್ಥಾನ ಗರಡಿ ನೇಮ ನಡೆಯಲಿದೆ. ಹೊರೆಕಾಣಿಕೆ ಮೆರವಣಿಗೆ ಫೆ. 25ರಂದು ಮಧ್ಯಾಹ್ನ 12ಕ್ಕೆ ಪುತ್ತೂರು ದೇವಸ್ಥಾನದ ಗದ್ದೆಯಿಂದ ಕ್ಷೇತ್ರಕ್ಕೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. 6 ದಿನಗಳಲ್ಲಿ ಸಾಂಸ್ಕೃತಿಕ ವೈವಿಧ್ಯ, 5 ದಿನ ಧಾರ್ಮಿಕ ಸಭೆ ನಡೆಯಲಿದೆ.

 

Vishwa News 24

Recent Posts

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

36 minutes ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

1 hour ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

1 hour ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

2 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

2 hours ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

2 hours ago