ಗೆಜ್ಜೆಗಿರಿ ನಂದನಬಿತ್ತಿಲ್‌ ಕ್ಷೇತ್ರ : ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಸಜ್ಜು , 500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ.. Vishwanews24

ಗೆಜ್ಜೆಗಿರಿ ನಂದನಬಿತ್ತಿಲ್‌ ಕ್ಷೇತ್ರ : ಪ್ರತಿಷ್ಠಾ ಬ್ರಹ್ಮ ಕಲಶೋತ್ಸವಕ್ಕೆ ಸಜ್ಜು ..

500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ..

ಪುತ್ತೂರು : ತಾಲೂಕಿನ ಗೆಜ್ಜೆಗಿರಿ ನಂದನ ಬಿತ್ತಿಲ್‌ ಕ್ಷೇತ್ರದಲ್ಲಿ ಫೆ.24ರಿಂದ ಮಾ.2ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮ ನಡೆಯಲಿದೆ.

500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ದೇಯಿ ಬೈದ್ಯೆತಿ, ಕೋಟಿ –ಚೆನ್ನಯ ಮೂಲಸ್ಥಾನದಲ್ಲಿ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ಚಾರಿತ್ರಿಕಗೊಳಿಸಲು 22 ಉಪ ಸಮಿತಿಗಳ ಮೂಲಕ ಸಿದ್ಧತೆ ಮಾಡಲಾಗುತ್ತಿದೆ. ಜಗತ್ತಿನೆಲ್ಲೆಡೆ ಇರುವ ಕ್ಷೇತ್ರದ ಭಕ್ತರನ್ನು ಸಂಪರ್ಕಿಸುವ ಕಾರ್ಯ ನಡೆದಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಕ್ಷೇತ್ರಾಡಳಿತ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ತಿಳಿಸಿದೆ.

ಗೆಜ್ಜೆಗಿರಿಯಲ್ಲಿ ಎಲ್ಲ ಸಾನ್ನಿಧ್ಯಗಳ ನಿರ್ಮಾಣ ಪೂರ್ಣಗೊಂಡಿದೆ. ಗುರು ಸಾಯನ ಬೈದ್ಯರು, ಮಾತೆ ದೇಯಿ ಬೈದ್ಯೆತಿ ಮತ್ತು ಕೋಟಿ- ಚೆನ್ನಯರು ಬಾಳಿ ಬದುಕಿದ್ದ ಪ್ರಾಚೀನ ಮನೆಯನ್ನೇ ಸತ್ಯಧರ್ಮ ಚಾವಡಿ ಹೆಸರಿನಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಿಸಲಾಗಿದೆ. ಶಿಖರಾಗ್ರದಲ್ಲಿ ಕೋಟಿ – ಚೆನ್ನಯ ಮೂಲಸ್ಥಾನ ಗರಡಿ ಮತ್ತು ಬೆರ್ಮೆರ್‌ ಗುಂಡ ತಲೆ ಎತ್ತಿದ್ದು, ತಪ್ಪಲಲ್ಲಿ ಸತ್ಯಧರ್ಮ ಚಾವಡಿ, ಧೂಮಾವತಿ ದೈವಸ್ಥಾನ, ಕುಪ್ಪೆ ಪಂಜುರ್ಲಿ ದೈವಸ್ಥಾನ, ಕಲ್ಲಾಲ್ದಾಯ ಮತ್ತು ಕೊರತಿ ಸಾನ್ನಿಧ್ಯ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆ ಹಾಗೂ ಮಾತೆ ದೇಯಿ ಬೈದ್ಯೆತಿ ಸಮಾಧಿ ಪುನರುತ್ಥಾನ ಪೂರ್ಣಗೊಂಡಿದೆ.

ಫೆ. 24ರಂದು ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಾನಗಳು ಆರಂಭಗೊಳ್ಳಲಿದ್ದು, 28ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ. ಫೆ. 29ರಿಂದ ಮಾ. 2ರ ವರೆಗೆ ಮೂಲಸ್ಥಾನ ಗರಡಿ ನೇಮ ನಡೆಯಲಿದೆ. ಹೊರೆಕಾಣಿಕೆ ಮೆರವಣಿಗೆ ಫೆ. 25ರಂದು ಮಧ್ಯಾಹ್ನ 12ಕ್ಕೆ ಪುತ್ತೂರು ದೇವಸ್ಥಾನದ ಗದ್ದೆಯಿಂದ ಕ್ಷೇತ್ರಕ್ಕೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. 6 ದಿನಗಳಲ್ಲಿ ಸಾಂಸ್ಕೃತಿಕ ವೈವಿಧ್ಯ, 5 ದಿನ ಧಾರ್ಮಿಕ ಸಭೆ ನಡೆಯಲಿದೆ.

 

Vishwa News 24

Recent Posts

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

9 minutes ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

20 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

22 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

22 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

23 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

23 hours ago