Featured

ಉಡುಪಿ : ಗೆದ್ದಲು ತಿನ್ನುತ್ತಿರುವ ಅರ್ಜಿ ಮತ್ತೆ ಓಪನ್ – ಬಡವರಿಗೆ ಮನೆ ಮಂಜೂರಾತಿ ಮಾಡುವ ಕೆಲಸ ಮಾಡುವೆ : ವಿನಯ ಕುಮಾರ್ ಸೊರಕೆ – Vishwanews24

ಬಿಜೆಪಿ ದೇವಸ್ಥಾನ ದ ವಿಚಾರದಲ್ಲಿ ರಾಜಕೀಯ ಶುರುಮಾಡಿ ದೇವಸ್ಥಾನವನ್ನೆ ನಾಶ ಮಾಡಲು ಪ್ರಯತ್ನ ಮಾಡುತ್ತಿದೆ : ವಿನಯ ಕುಮಾರ್ ಸೊರಕೆ

ಉಡುಪಿ: ನಾನು ಶಾಸಕನಾಗಿದ್ದ ಕಾಲದಲ್ಲಿ 94 ಸಿ ಕಾನೂನು ಮತ್ತು ಅಕ್ರಮ‌ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಯನ್ನು ಈ ಭಾಗದಲ್ಲಿ ಶಿಫಾರಸು ಮಾಡಿದ್ದೇನೆ..‌ನಾನು‌ ಶಿಫಾರಸು ಮಾಡಿದ ಅರ್ಜಿಯನ್ನು ಸಂಪೂರ್ಣ ವಾಗಿ ತಿರಸ್ಕರಿಸಲಾಗಿದೆ ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ
ಪೆರ್ಡೂರು ಪೇಟೆಯಲ್ಲಿ‌ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ನಾನು ಶಿಫಾರಸು ಮಾಡಿದ ಎಲ್ಲಾ ಅರ್ಜಿಗಳು ಗೆದ್ದಲು ಹಿಡಿದಿದ್ದು ಅರ್ಜಿಯ ಕಟ್ಟನ್ನು ಮತ್ತೆ ಓಪನ್ ಅದಕ್ಕೆ ಮರು‌ಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ ಕೆಲಸವನ್ನು ಮಾಡ್ತಿನಿ ಅಂತಾ ಅವರು ಹೇಳಿದರು.

ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೈಪಾಸ್ ರಸ್ತೆ ಮೂಲಕ ಪೆರ್ಡೂರು ದೇವಸ್ಥಾನಕ್ಕೆ ಹಾನಿ ಆಗದ ಹಾಗೇ ರಸ್ತೆ ಅಗಲೀಕರಣ ಮಾಡಬೇಕಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಬಹಳಷ್ಟು ರಾಜಕೀಯ ಮಾಡ್ತಾ ಇದೆ.ಈಗಿನ ವ್ಯವಸ್ಥೆ ಯಲ್ಲಿ ಮಾಡೋದಾದಲ್ಲಿ ದೇವಸ್ಥಾನದ ಅರ್ಚಕರು ತಿಳಿಸಿದಂತೆ ಪಾಣಿಗ್ರಹದಲ್ಲಿ ಕಂಪನ ಬರುತ್ತದೆ.‌ ಕೆರೆ, ರಥಬೀದಿ ಎಲ್ಲಾನು ನಾಶವಾಗುತ್ತದೆ. ದೇವಸ್ಥಾನಕ್ಕೆ ಧಕ್ಕೆ ಆಗುತ್ತದೆ… ‌ಬೈಪಾಸ್ ರಸ್ತೆ ಮೂಲಕ ಈ ಕಾಮಗಾರಿ ಆದರೆ ದೇವಸ್ಥಾನ ಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ ದೇವಸ್ಥಾನಕ್ಕೆ ಧಕ್ಕರ ಆಗದೇ ರಸ್ತೆ ಅಗಲೀಕರಣಕ್ಕೆ ನಮ್ಮ. ಮುಂದುವರಿಸುತ್ತೇವೆ ಅಂತಾ ಸೊರಕೆ ಹೇಳಿದ್ದಾರೆ.ಬಿಜೆಪಿ ದೇವಸ್ಥಾನ ದ ವಿಚಾರದಲ್ಲಿ ರಾಜಕೀಯ ಶುರುಮಾಡಿ ದೇವಸ್ಥಾನವನ್ನೆ ನಾಶ ಮಾಡಲು ಪ್ರಯತ್ನ ಮಾಡುತ್ತಿದೆ ಅಂತಾ ಸೊರಕೆ ಅಕ್ರೋಶ ವ್ಯಕ್ತಪಡಿಸಿದರು.

ನನ್ನ ಕ್ಷೇತ್ರದಾದ್ಯಂತ ಕುಡಿಯುವ ನೀರಿನ‌ ಸಮಸ್ಯೆ ಬಹಳಷ್ಟು ಇದೆ. ಚುನಾವಣಾ ಸಂದರ್ಭದಲ್ಲಿ ಕುಡಿಯುವ‌ ನೀರಿಗೆ ಆದ್ಯತೆ ಕೊಡ್ತಾ ಇಲ್ಲ. ಮೂಲಭೂತ ಸೌಕರ್ಯದಿಂದ ಜನರನ್ನು ವಂಚಿತರಾಗುವ ಕೆಲಸವನ್ನು ಬಿಜೆಪಿ ಮಾಡ್ತಾ ಇದೆ.ಕುಡಿಯುವ ನೀರಿನ ಮೂಲ ಹುಡುಕುವ ಬದಲು ಪೈಪ್ ಲೈನ್ ಮಾತ್ರ ಹಾಕುವ ಕೆಲಸ ಆಗ್ತಿದೆ ಅಂತಾ ಸೊರಕೆ‌ ವ್ಯಂಗ್ಯವಾಡಿದರು.

ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೊಳಿ ಮಾತನಾಡಿ ಈಗಿನ ಬಿಜೆಪಿ ಅಭ್ಯರ್ಥಿಯ ಮೇಲೆ ಎರಡು ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ಅವರೇ ಸಲ್ಲಿಸಿದ ಅಫಿದಾವಿತ್ ದಾಖಲಾಗಿದೆ.ಗಣಿ ಲೂಟಿಯಲ್ಲಿ ಸರಕಾರಕ್ಕೆ 81 ಕೋಟಿ ವಂಚಿಸಿದ ಪ್ರಕರಣ ಇದರಲ್ಲಿ ಮುಖ್ಯವಾದದ್ದು.ಈ ಬಗ್ಗೆ ಜನರು ಯೋಚಿಸಬೇಕಾಗಿದೆ.‌ಆಲೋಚಿಸಿ ಮತ ಹಾಕಬೇಕಾಗಿದೆ. ಕಮಲ‌ ಕೆರೆಯಲ್ಲಿದ್ದರೆ ಚಂದ, ತೆನೆ ಗದ್ದೆಯಲ್ಲಿದ್ದರೆ ಚಂದ, ಪ್ರಾಮಾಣಿಕವಾದ ಕೈ ಅಧಿಕಾರದಲ್ಲಿದ್ದರೆ ಚಂದ ಅಂತೆ. ಹಾಗಾಗಿ ಪ್ರಾಮಾಣಿಕ ರಾಜಕಾರಣಿ ಸೊರಕೆಯವರಿಗೆ ಉತ್ತಮ ಆಯ್ಕೆ ಮರೋಳಿ ಅಭಿಪ್ರಾಯ ಪಟ್ಟರು.

ಕಾಂಗ್ರೆಸ್ ಮುಖಂಡರಾದ ಶಾಂತಾರಾಮ‌ಸೂಡ, ಚರಣ್ ವಿಠಲ್ ಕುದಿ, ಜಿತೇಂದ್ರ ಫುಟಾರ್ಡೊ, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago