ಗೊಂಬೆಯ ಕೈ ಹಿಡಿದ ಚಂದನ್ , ಯುವ ದಸರಾ ಕಾರ್ಯಕ್ರಮದಲ್ಲಿ ಉಂಗುರ ತೊಡಿಸುವ ಮೂಲಕ ಪ್ರಪೋಸ್ -Vishwanews24

Featured, ರಾಜ್ಯ ನ್ಯೂಸ್

ಮೈಸೂರು:ಕನ್ನಡ Rapper, ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಮತ್ತು ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಮೈಸೂರಿನಲ್ಲಿ ನಡೆದಿದೆ. ನಿನ್ನೆ  ಅಭಿಮಾನಿಗಳ ಮುಂದೆ ಚಂದನ್ ಹಾಗೂ ನಿವೇದಿತಾ ಎಂಗೇಜ್ ಆಗಿದ್ದಾರೆ.

ಯುವ ದಸರಾ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ-ನಿವೇದಿತಾಗೌಡ ಎಂಗೇಜ್ ಆಗಿದ್ದಾರೆ. ಝಗಮಗಿಸುವ ವೇದಿಕೆಯಲ್ಲಿ ನಿವೇದಿತಾಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಬೆರಳಿಗೆ ಉಂಗುರ ತೊಡಿಸಿ ನಿನ್ನನ್ನೇ ಮದುವೆಯಾಗುತ್ತೇನೆಂದು ಘೋಷಿಸಿದ್ದಾರೆ. ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರೇಮ ನಿವೇದನೆ ಮಾಡಿದರು.

‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಪ್ರತಿ ಸೀಸನ್ ನಲ್ಲಿಯೂ ಸಾಕಷ್ಟು ಜೋಡಿಗಳು ಹುಟ್ಟುಕೊಳ್ಳುತ್ತಾರೆ. ಕಾರ್ಯಕ್ರಮದಲ್ಲಿ ಪ್ರೇಮಪಕ್ಷಿಗಳ ಹಾಗೆ ಜೊತೆ ಜೊತೆಗೆ ಒಡಾಡುವ, ಜೋಡಿಗಳು ಕಾರ್ಯಕ್ರಮ ಮುಗಿದ ಮೇಲೆ ಮರೆಯಾಗುತ್ತಾರೆ. ಆದರೆ, ಚಂದನ್ ಮತ್ತು ನಿವೇದಿತಾ ಈಗ ನಿಜ ಜೀವನದಲ್ಲಿ ಒಂದಾಗಿದ್ದು, ಹೊಸ ಬದುಕಿನ ಕಾಲಿಟ್ಟಿದ್ದಾರೆ.

ತಮ್ಮ ಪ್ರಿಯತಮೆ ನಿವೇದಿತಾಗೆ ಚಂದನ್ ಶೆಟ್ಟಿ ದೊಡ್ಡ ಸರ್ ಪ್ರೈಸ್ ನೀಡಿದ್ದಾರೆ. ಅಭಿಮಾನಿಗಳ ಮುಂದೆ ಆಕೆಯ ಕೈಗೆ ಉಂಗುರ ಹಾಕಿದ್ದಾರೆ.

ನಿನ್ನೆ (ಅಕ್ಟೋಬರ್ 4) ಯುವ ದಸರಾದಲ್ಲಿ ಚಂದನ್ ಶೆಟ್ಟಿ ಸಂಗೀತ ಕಾರ್ಯಕ್ರಮ ನೀಡಿದರು. ಇದೇ ಕಾರ್ಯಕ್ರಮದಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದಾರೆ. ಆಕೆಯ ಕೈಗೆ ಉಂಗುರ ತೊಡಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೇದಿಕೆ ಮೇಲೆ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವುದರ ಮೂಲಕ ನಿವೇದಿತಾಗೆ ಸರ್ ಪ್ರೈಸ್ ನೀಡಿದ್ದಾರೆ.

ವೇದಿಕೆ ಮೇಲೆ ನಿವೇದಿತಾಗೆ ರಿಂಗ್ ಹಾಕಿದ ಚಂದನ್ ನಂತರ ತಮ್ಮ ಅಭಿಮಾನಿಗಳ ಜೊತೆಗೆ ಮಾತನಾಡಿದರು. ”ಈ ದಿನ ನಾನು ಪ್ರಪೋಸ್ ಮಾಡುತ್ತಾನೆ ಎಂದು ತಿಳಿದಿರಲಿಲ್ಲ. ಆದರೆ, ನಿಮ್ಮೆಲ್ಲರ ಮುಂದೆ ನಿವೇದಿತಾಗೆ ಪ್ರಪೋಸ್ ಮಾಡಿದ್ದೇನೆ. ಸದ್ಯದಲ್ಲಿಯೇ ನಾವು ಮದುವೆ ಆಗುತ್ತಿದ್ದೇವೆ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲೆ ಇರಲಿ.” ಎಂದು ಹೇಳಿದ್ದಾರೆ.