ಮುನಿಯಾಲು: ಯುವಸಮುದಾಯವನ್ನು ಕೃಷಿಯತ್ತ ಆಕರ್ಷಿಸಲು ವಿಶೇಷ ಯೋಚನೆ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ಮುನಿಯಾಲಿನಲ್ಲಿ
ಸಂಜೀವಿನಿ ಗೋಧಾಮವನ್ನು ಕೃಷಿ ಸಂಶೋಧನಾ ಕೇಂದ್ರದಂತೆ ನಿರ್ಮಿಸಿದ್ದಾರೆ. ಆ ಮೂಲಕ ಕೈಗಾರಿಕೋಧ್ಯಮಿಯೊಬ್ಬರು ಕೃಷಿಗೆ ಆದ್ಯತೆ ನೀಡುತ್ತಿರುವುದು ಮಹಾನ್ ಕಾರ್ಯ. ಗೋಧಾಮದ ಮೂಲಕ ಮುನಿಯಾಲಿನ ಹೆಸರು ಜಾಗತಿಕಮಟ್ಟದಲ್ಲಿ ರಾರಾಜಿಸುವಂತೆ ಆಗಿದೆ ಎಂದು ಕಾರ್ಕಳದ ಕಾಂಗ್ರೆಸ್ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಹೇಳಿದರು.
ಇದನ್ನೂ ಓದಿ:
ಅವರು ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆ.19 ರಿಂದ 21 ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು. ರೈತರು, ಕೃಷಿ ಮತ್ತು ಯುವಸಮುದಾಯ ವನ್ನು ಕೃಷಿಯತ್ತ ಮರಳಿ ತಂದು ಬದುಕು ಕಟ್ಟಲು ಪ್ರೇರಣೆ ನೀಡುವ ಮಹಾಸಂಕಲ್ಪದಿಂದ ನಡೆಯುವ ಪಾರಂಪರಿಕ ಶ್ರೀಮನ್ನಾಗ ಮಂಡಲವನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಎಂದು ಉದಯ ಕುಮಾರ್ ಶೆಟ್ಟಿ ಹೇಳಿದರು.
ಮುನಿಯಾಲು ಗೋಧಾಮದ ಸಂಸ್ಥಾಪಕ ಡಾ.ಜಿ.ರಾಮಕೃಷ್ಣ ಆಚಾರ್, ಸವಿತಾ ರಾಮಕೃಷ್ಣ ಆಚಾರ್, ನಮಿತಾ ಉದಯ ಕುಮಾರ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಕಾರ್ಕಳ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಯಾಲು ಗೋಪಿನಾಥ ಭಟ್, ಪಡುಕುಡೂರು ಪ್ರಸನ್ನ ಶೆಟ್ಟಿ, ಭಾರವಿ ಶೆಟ್ಟಿ, ಕಡ್ತಲ ಸುನೀಲ್ ಹೆಗ್ಡೆ, ಕುಕ್ಕುಜೆ ಸಂಪತ್ ಪೂಜಾರಿ, ಎಳ್ಳಾರೆ ನಾರಾಯಣ ಆಚಾರ್ ಸಹಿತ ವಿವಿಧ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ:
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…